ರಿಯಾದ್: ಇಸ್ಲಾಮಿಕ್ ಸಂಘಟನೆಯಾದ ತಬ್ಲಿಘಿ ಜಮಾತ್ ಅನ್ನು ಸೌದಿ ಅರೇಬಿಯಾ ನಿಷೇಧಿಸಿದೆ. “ಭಯೋತ್ಪಾದನೆಯ ಹೆಬ್ಬಾಗಿಲುಗಳಲ್ಲಿ ಒಂದಾಗಿದೆ” ಎಂದು ಕರೆದಿರುವ ಈ ಗುಂಪನ್ನು ಕಾರ್ಯನಿರ್ವಹಿಸದಂತೆ ನಿಷೇಧಿಸಿದೆ.
ತಬ್ಲೀಗ್ ಜಮಾಅತ್ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಶುಕ್ರವಾರ ಮಸೀದಿಗಳಲ್ಲಿ ಧರ್ಮೋಪದೇಶವನ್ನು ನೀಡುವಂತೆ ಸೌದಿ ಇಸ್ಲಾಮಿಕ್ ವ್ಯವಹಾರಗಳ ಸಚಿವರಾದ ಡಾ. ಅಬ್ದುಲ್ಲತೀಫ್ ಆಲ್-ಶೈಖ್ ಈ ಹಿಂದೆ ಸೂಚನೆ ನೀಡಿದ್ದರು.
ತಬ್ಲೀಗ್ ಗುಂಪಿನ ಚಟುವಟಿಕೆಗಳು, ಪ್ರವಾದಿವರ್ಯರ ಆದರ್ಶಕ್ಕೆ ವಿರುದ್ಧವೂ, ಸಮೂಹವನ್ನು ತಪ್ಪುದಾರಿಗೆಳೆಯುತ್ತಿರುವುದೂ, ಅಪಾಯಕಾರಿಯೂ ಆಗಿದೆ. ಇದು ಭಯೋತ್ಪಾದನೆಯ ಹೆಬ್ಬಾಗಿಲುಗಳಲ್ಲಿ ಒಂದಾಗಿದೆ ಎಂದು ಸಚಿವಾಲಯ ಹೇಳಿದೆ. ಇಂತಹ ಗುಂಪುಗಳೊಂದಿಗಿನ ಸಂಪರ್ಕವನ್ನು ನಿಷೇಧಿಸಲಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
1926 ರಲ್ಲಿ ಭಾರತದ ಮೇವಾತ್ ಪ್ರದೇಶದಲ್ಲಿ, ಮುಹಮ್ಮದ್ ಇಲ್ಯಾಸ್ ಅಲ್-ಕಂಧ್ಲಾವಿ ಎಂಬವರಿಂದ ಸ್ಥಾಪನೆಯಾದ ತಬ್ಲೀಘಿ ಜಮಾಅತ್, ನವೀನ ಸಿದ್ಧಾಂತಗಳ ಇಸ್ಲಾಮಿಕ್ ಮಿಷನರಿ ಚಳುವಳಿಯಾಗಿದೆ. ತನ್ನದ್ದು ಅಹ್ಲೇ ಹದೀಸ್ ಅಥವಾ ಸಲಫಿ ಆದರ್ಶವಾಗಿದೆ ಎಂದು ಅದರ ವಕ್ತಾರರು ವ್ಯಕ್ತಪಡಿಸಿದ್ದರು.
ಭಾರತ ಸಹಿತ ವಿಶ್ವಾದ್ಯಂತವಿರುವ ಸುನ್ನೀ ಉಲಮಾಗಳು ತಬ್ಲೀಗ್ ಜಮಾಅತ್ ನ್ನು ಆರಂಭದಿಂದಲೇ ವಿರೋಧಿಸುತ್ತಾ ಬಂದಿರುವುದು ಗಮನಾರ್ಹ.
















ಇನ್ನಷ್ಟು ಸುದ್ದಿಗಳು
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ