ರಿಯಾದ್: ಇಸ್ಲಾಮಿಕ್ ಸಂಘಟನೆಯಾದ ತಬ್ಲಿಘಿ ಜಮಾತ್ ಅನ್ನು ಸೌದಿ ಅರೇಬಿಯಾ ನಿಷೇಧಿಸಿದೆ. “ಭಯೋತ್ಪಾದನೆಯ ಹೆಬ್ಬಾಗಿಲುಗಳಲ್ಲಿ ಒಂದಾಗಿದೆ” ಎಂದು ಕರೆದಿರುವ ಈ ಗುಂಪನ್ನು ಕಾರ್ಯನಿರ್ವಹಿಸದಂತೆ ನಿಷೇಧಿಸಿದೆ.
ತಬ್ಲೀಗ್ ಜಮಾಅತ್ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಶುಕ್ರವಾರ ಮಸೀದಿಗಳಲ್ಲಿ ಧರ್ಮೋಪದೇಶವನ್ನು ನೀಡುವಂತೆ ಸೌದಿ ಇಸ್ಲಾಮಿಕ್ ವ್ಯವಹಾರಗಳ ಸಚಿವರಾದ ಡಾ. ಅಬ್ದುಲ್ಲತೀಫ್ ಆಲ್-ಶೈಖ್ ಈ ಹಿಂದೆ ಸೂಚನೆ ನೀಡಿದ್ದರು.
ತಬ್ಲೀಗ್ ಗುಂಪಿನ ಚಟುವಟಿಕೆಗಳು, ಪ್ರವಾದಿವರ್ಯರ ಆದರ್ಶಕ್ಕೆ ವಿರುದ್ಧವೂ, ಸಮೂಹವನ್ನು ತಪ್ಪುದಾರಿಗೆಳೆಯುತ್ತಿರುವುದೂ, ಅಪಾಯಕಾರಿಯೂ ಆಗಿದೆ. ಇದು ಭಯೋತ್ಪಾದನೆಯ ಹೆಬ್ಬಾಗಿಲುಗಳಲ್ಲಿ ಒಂದಾಗಿದೆ ಎಂದು ಸಚಿವಾಲಯ ಹೇಳಿದೆ. ಇಂತಹ ಗುಂಪುಗಳೊಂದಿಗಿನ ಸಂಪರ್ಕವನ್ನು ನಿಷೇಧಿಸಲಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
1926 ರಲ್ಲಿ ಭಾರತದ ಮೇವಾತ್ ಪ್ರದೇಶದಲ್ಲಿ, ಮುಹಮ್ಮದ್ ಇಲ್ಯಾಸ್ ಅಲ್-ಕಂಧ್ಲಾವಿ ಎಂಬವರಿಂದ ಸ್ಥಾಪನೆಯಾದ ತಬ್ಲೀಘಿ ಜಮಾಅತ್, ನವೀನ ಸಿದ್ಧಾಂತಗಳ ಇಸ್ಲಾಮಿಕ್ ಮಿಷನರಿ ಚಳುವಳಿಯಾಗಿದೆ. ತನ್ನದ್ದು ಅಹ್ಲೇ ಹದೀಸ್ ಅಥವಾ ಸಲಫಿ ಆದರ್ಶವಾಗಿದೆ ಎಂದು ಅದರ ವಕ್ತಾರರು ವ್ಯಕ್ತಪಡಿಸಿದ್ದರು.
ಭಾರತ ಸಹಿತ ವಿಶ್ವಾದ್ಯಂತವಿರುವ ಸುನ್ನೀ ಉಲಮಾಗಳು ತಬ್ಲೀಗ್ ಜಮಾಅತ್ ನ್ನು ಆರಂಭದಿಂದಲೇ ವಿರೋಧಿಸುತ್ತಾ ಬಂದಿರುವುದು ಗಮನಾರ್ಹ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ