ಮಂಜೇಶ್ವರ: ಮಳ್’ಹರು ನೂರಿಲ್ ಇಸ್ಲಾಮಿತ್ತಅಲೀಮಿ ವಿದ್ಯಾ ಸಂಸ್ಥೆಯಲ್ಲಿ ಜ್ಞಾನಾರ್ಜನೆಗೈಯುತ್ತಿರುವ ವಿದ್ಯಾರ್ಥಿಗಳ ನಾಲ್ಕು ದಿನಗಳ ವಿದ್ಯಾರ್ಥಿ ಫೆಸ್ಟ್ ಅಲ್-ಖಲಂಗೆ ಅಮೋಘ ಚಾಲನೆ. ಸಂಜೆ ನಾಲ್ಕು ಗಂಟೆಗೆ ಸಯ್ಯಿದ್ ಅಬ್ದುರ್ರಹ್ಮಾನ್ ಶಹೀರ್ ಅಲ್-ಬುಖಾರಿ ಧ್ವಜಾರೋಹಣ ನೆರವೇರಿಸಿದರು.
ನಂತರ ನಡೆದ ಉದ್ಘಾಟನಾ ಸಮಾರಂಭದಲ್ಲಿ ಹಸನ್ ಸಅದಿ ಅಲ್-ಅಫ್ಳಲಿ ಉಸ್ತಾದರು ಅಧ್ಯಕ್ಷತೆ ವಹಿಸಿದರು. ಮಳ್’ಹರ್ ವೈಸ್ ಚಯರ್’ಮಾನ್ ಸಯ್ಯಿದ್ ಅಬ್ದುರ್ರಹ್ಮಾನ್ ಶಹೀರ್ ಅಲ್-ಬುಖಾರಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಪ್ರಮುಖ ಮಾಪಿಳ ಹಾಡು ಗಾಯಕ ಮತ್ತು ಬರಹಗಾರರಾದ ಬಾಪು ವೆಳ್ಳಿಪ್ಪರಂಬ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಡಾ.ಮುಹಮ್ಮದ್ ಕುಂಞಿ ಸಖಾಫಿ ಕೊಲ್ಲಂ, ಯೂಸುಫ್ ಲತೀಫಿ ವಾಣಿಯಂಬಳಂ, ಕುಞಾಲಿ ಸಖಾಫಿ ಕೋಟೂರು ಪ್ರಭಾಷಣ ಗೈದರು. ಸಯ್ಯಿದ್ ಮುಸ್ತಫಾ ಸಿದ್ದೀಖಿ ಅಲ್-ಬುಖಾರಿ ಮಲಪ್ಪುರಂ, ಉಮರುಲ್ ಫಾರೂಖ್ ಮದನಿ ಮಚ್ಚಂಪಾಡಿ, ಶರೀಫ್ ಬಾಖವಿ, ಸಿದ್ದೀಕ್ ಸಅದಿ ತೌಡುಗೋಳಿ, ಅನಸ್ ಸಿದ್ದೀಕಿ ಚೆರ್ಕಳ, ಜಾಬಿರ್ ಸಖಾಫಿ ಕೋಡಂಬುಝ, ತ್ವಯ್ಯಿಬ್ ಸಅದಿ ಮಲಪ್ಪುರಂ, ರಊಫ್ ಮಿಸ್ಬಾಹಿ ಅಲ್-ಅಫ್’ಳಲಿ, ಅನ್ಸಾರ್ ಸಖಾಫಿ ಮಂಜನಾಡಿ, ನೌಫಲ್ ಸಖಾಫಿ ಪಾಣೆಮಂಗಳೂರು, ಸಯ್ಯಿದ್ ಶಕೀಲ್ ಅಲ್-ಹಾದಿ, ಹಸನ್ ಕುಂಞಿ, ಝಿಯಾದ್ ಮಾಸ್ಟರ್ ಮುಟ್ಟಂ, ನಂಶಾದ್ ಸರ್, ಮುಸ್ತಫಾ ಕಡಂಬಾರ್, , ಹಾರಿಸ್ ಹಾಜಿ ಝೇಗಂ, ಅದ್ದು ಹಾಜಿ ಮುಂತಾದವರು ಉಪಸ್ಥಿತರಿದ್ದರು.
ಸಯ್ಯಿದ್ ಮುಸ್ತಫಾ ಸಿದ್ದೀಖಿ ಅಲ್-ಬುಖಾರಿ ಪ್ರಾರ್ಥನೆಗೆ ನೇತೃತ್ವ ನೀಡಿದರು. ಝುಬೈರ್ ಸಖಾಫಿ ವಟ್ಟೋಳಿ ಸ್ವಾಗತ ಹಾಗೂ ಸಲೀಕ್ ಧನ್ಯವಾದ ಸಲ್ಲಿಸಿದರು. ಮುಂದುವರೆದು ಇನ್ನೂರಕ್ಕೂ ಮಿಕ್ಕ ಕಲಾ ಸ್ಪರ್ಧೆಗಳಲ್ಲಿ ಮುನ್ನೂರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಶನಿವಾರ, ಭಾನುವಾರ ದಿನಗಳಲ್ಲಿ ಭಾಗವಹಿಸಲಿದ್ದಾರೆ. ನಾಳೆ ಮಗ್ರಿಬ್ ನಮಾಝಿನ ಬಳಿಕ ವಿದ್ಯಾರ್ಥಿ ಫೆಸ್ಟ್ ಅಲ್-ಖಲಂನ ಸಮಾರೋಪ ಸಮಾರಂಭ ನಡೆಯಲಿದೆ…
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ