ಸೌದಿ ಅರೇಬಿಯಾ: ಶಿವಮೊಗ್ಗ ಜಿಲ್ಲೆಯ ಸಾಗರದ ನಿವಾಸಿ ಮುಹೀಬುಲ್ಲಾ ಎಂಬವರು ದಮ್ಮಾಮ್ ಖಾಸಗಿ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಕಳೆದ ವರ್ಷ ಹಠಾತ್ ಕಾಣಿಸಿಕೊಂಡ ರೋಗವೊಂದು ಉಲ್ಬಣಗೊಂಡು ಕೋಮಾ ಸ್ಥಿತಿಗೆ ಜಾರಿದ್ದರು. ನಂತರ ಇವರನ್ನು ಕಿಂಗ್ ಫಹಾದ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ವಿದೇಶದಿಂದ ಇಂತಹ ರೋಗಿಯನ್ನು ತಾಯ್ನಾಡಿಗೆ ಮರಳಿ ಕಳುಹಿಸುವುದು ದೊಡ್ಡ ಸವಾಲಾಗಿದೆ.

ತೀರ್ಥಹಳ್ಳಿ ಮೂಲದ ನೂರ್ ಎಂಬವರು ಈ ವಿಚಾರವನ್ನು ಕೆ.ಸಿ.ಎಫ್ ಬಳಿ ಮುಹೀಬುಲ್ಲಾರನ್ನು ತಾಯ್ನಾಡಿಗೆ ಕಳುಹಿಸಿ ಕೊಡುವ ಬಗ್ಗೆ ಸಹಕಾರ ನೀಡುವಂತೆ ಕೇಳಿಕೊಂಡಾಗ ಕೆಸಿಎಫ್ ಸಾಂತ್ವನ ವಿಂಗ್ ನಾಯಕರಾದ ಭಾಷಾ ಗಂಗಾವಳಿ ಹಾಗೂ ಮುಹಮ್ಮದ್ ಮಲೆಬೆಟ್ಟು ರವರ ನೇತೃತ್ವದಲ್ಲಿ ಸಂಘಟನೆಯ ಇತರ ಸ್ವಯಂಸೇವಕರೊಂದಿಗೆ ಭೇಟಿ ನೀಡಿ ರೋಗಿಗೆ ಅವರ ಮೂಲಭೂತ ಅಗತ್ಯಗಳನ್ನು ಪೂರೈಸಿದೆ. ಕೆ.ಸಿ.ಎಫ್ ಜೊತೆಗೆ ಮಲನಾಡ್ ಗಲ್ಫ್ ಕಮೀಟಿ ಮುಖಂಡರಾಗಿರುವ ಅಬ್ದುಲ್ ಸತ್ತಾರ್ ಮತ್ತು ಅನ್ಸಾರ್ ಮತ್ತವರ ಸಂಗಡಿಗರು ಸಹಕಾರ ನೀಡಿರುತ್ತಾರೆ.

ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಕಚೇರಿಯೊಂದಿಗಿನ ನಿರಂತರ ಸಂಪರ್ಕದ ಪರಿಣಾಮವಾಗಿ ಡಿಸೆಂಬರ್ 02 ರಂದು ಕೆಸಿಎಫ್ ಮುಹಿಬ್ಬುಲ್ಲಾರವರನ್ನು ಮರಳಿಸುವ ಎಲ್ಲಾ ಕಡತಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಊರಿಗೆ ಕಳುಹಿಸಿಕೊಡುವಲ್ಲಿ ಯಶಸ್ವಿಯಾಯಿತು. ಕೇರಳದ ತಿರುವನಂತಪುರಂ ತಲುಪಿದ ಮುಹಿಬ್ಬುಲ್ಲಾರವರನ್ನು ಕರ್ನಾಟಕ ಮುಸ್ಲಿಂ ಜಮಾಅತ್ ಅಧೀನದ ‘ಸಹಾಯ್’ ತಂಡ ರೋಗಿಯನ್ನು ಆಂಬುಲನ್ಸ್ ಮುಖಾಂತರ ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ತಲುಪಿಸಿತು. ಪ್ರಸ್ತುತ ಅವರು ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈ ಮಾನವೀಯ ಕಾರ್ಯಾಚರಣೆಯಲ್ಲಿ ಕೆಸಿಎಫ್ ಸಾಂತ್ವನ ವಿಭಾಗದೊಂದಿಗೆ ಬೆನ್ನೆಲುಬಾಗಿ ನಿಂತ ದಮ್ಮಾಮ್ ಝೋನ್ ಕ್ಯಾಬಿನೆಟ್ ಸಮಿತಿ ಮತ್ತು ಕಾರ್ಯಕಾರಿ ಸದಸ್ಯರಿಗೆ ಹಾಗೂ ಇತರೆ ಸಂಘ ಸಂಸ್ಥೆಗಳ ನಾಯಕರಿಗೆ ಕೆಸಿಎಫ್ ಕೃತಜ್ಞತೆ ಸಲ್ಲಿಸಿದೆ.
~ ಸಾಂತ್ವನ ವಿಭಾಗ ~
ಕರ್ನಾಟಕ ಕಲ್ಚರಲ್ ಫೌಂಡೇಶನ್ –
ಕೆಸಿಎಫ್ ದಮ್ಮಾಮ್ ಝೋನ್.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು