ಸೌದಿ ಅರೇಬಿಯಾ: ಶಿವಮೊಗ್ಗ ಜಿಲ್ಲೆಯ ಸಾಗರದ ನಿವಾಸಿ ಮುಹೀಬುಲ್ಲಾ ಎಂಬವರು ದಮ್ಮಾಮ್ ಖಾಸಗಿ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಕಳೆದ ವರ್ಷ ಹಠಾತ್ ಕಾಣಿಸಿಕೊಂಡ ರೋಗವೊಂದು ಉಲ್ಬಣಗೊಂಡು ಕೋಮಾ ಸ್ಥಿತಿಗೆ ಜಾರಿದ್ದರು. ನಂತರ ಇವರನ್ನು ಕಿಂಗ್ ಫಹಾದ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ವಿದೇಶದಿಂದ ಇಂತಹ ರೋಗಿಯನ್ನು ತಾಯ್ನಾಡಿಗೆ ಮರಳಿ ಕಳುಹಿಸುವುದು ದೊಡ್ಡ ಸವಾಲಾಗಿದೆ.

ತೀರ್ಥಹಳ್ಳಿ ಮೂಲದ ನೂರ್ ಎಂಬವರು ಈ ವಿಚಾರವನ್ನು ಕೆ.ಸಿ.ಎಫ್ ಬಳಿ ಮುಹೀಬುಲ್ಲಾರನ್ನು ತಾಯ್ನಾಡಿಗೆ ಕಳುಹಿಸಿ ಕೊಡುವ ಬಗ್ಗೆ ಸಹಕಾರ ನೀಡುವಂತೆ ಕೇಳಿಕೊಂಡಾಗ ಕೆಸಿಎಫ್ ಸಾಂತ್ವನ ವಿಂಗ್ ನಾಯಕರಾದ ಭಾಷಾ ಗಂಗಾವಳಿ ಹಾಗೂ ಮುಹಮ್ಮದ್ ಮಲೆಬೆಟ್ಟು ರವರ ನೇತೃತ್ವದಲ್ಲಿ ಸಂಘಟನೆಯ ಇತರ ಸ್ವಯಂಸೇವಕರೊಂದಿಗೆ ಭೇಟಿ ನೀಡಿ ರೋಗಿಗೆ ಅವರ ಮೂಲಭೂತ ಅಗತ್ಯಗಳನ್ನು ಪೂರೈಸಿದೆ. ಕೆ.ಸಿ.ಎಫ್ ಜೊತೆಗೆ ಮಲನಾಡ್ ಗಲ್ಫ್ ಕಮೀಟಿ ಮುಖಂಡರಾಗಿರುವ ಅಬ್ದುಲ್ ಸತ್ತಾರ್ ಮತ್ತು ಅನ್ಸಾರ್ ಮತ್ತವರ ಸಂಗಡಿಗರು ಸಹಕಾರ ನೀಡಿರುತ್ತಾರೆ.

ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಕಚೇರಿಯೊಂದಿಗಿನ ನಿರಂತರ ಸಂಪರ್ಕದ ಪರಿಣಾಮವಾಗಿ ಡಿಸೆಂಬರ್ 02 ರಂದು ಕೆಸಿಎಫ್ ಮುಹಿಬ್ಬುಲ್ಲಾರವರನ್ನು ಮರಳಿಸುವ ಎಲ್ಲಾ ಕಡತಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಊರಿಗೆ ಕಳುಹಿಸಿಕೊಡುವಲ್ಲಿ ಯಶಸ್ವಿಯಾಯಿತು. ಕೇರಳದ ತಿರುವನಂತಪುರಂ ತಲುಪಿದ ಮುಹಿಬ್ಬುಲ್ಲಾರವರನ್ನು ಕರ್ನಾಟಕ ಮುಸ್ಲಿಂ ಜಮಾಅತ್ ಅಧೀನದ ‘ಸಹಾಯ್’ ತಂಡ ರೋಗಿಯನ್ನು ಆಂಬುಲನ್ಸ್ ಮುಖಾಂತರ ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ತಲುಪಿಸಿತು. ಪ್ರಸ್ತುತ ಅವರು ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈ ಮಾನವೀಯ ಕಾರ್ಯಾಚರಣೆಯಲ್ಲಿ ಕೆಸಿಎಫ್ ಸಾಂತ್ವನ ವಿಭಾಗದೊಂದಿಗೆ ಬೆನ್ನೆಲುಬಾಗಿ ನಿಂತ ದಮ್ಮಾಮ್ ಝೋನ್ ಕ್ಯಾಬಿನೆಟ್ ಸಮಿತಿ ಮತ್ತು ಕಾರ್ಯಕಾರಿ ಸದಸ್ಯರಿಗೆ ಹಾಗೂ ಇತರೆ ಸಂಘ ಸಂಸ್ಥೆಗಳ ನಾಯಕರಿಗೆ ಕೆಸಿಎಫ್ ಕೃತಜ್ಞತೆ ಸಲ್ಲಿಸಿದೆ.
~ ಸಾಂತ್ವನ ವಿಭಾಗ ~
ಕರ್ನಾಟಕ ಕಲ್ಚರಲ್ ಫೌಂಡೇಶನ್ –
ಕೆಸಿಎಫ್ ದಮ್ಮಾಮ್ ಝೋನ್.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ