ಬೆಂಗಳೂರು: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ದೇಶದ ಮೊದಲ ಸಿಡಿಎಸ್ ಬಿಪಿನ್ ರಾವತ್ ಅವ್ರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನ ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಟಿ.ಕೆ.ವಸಂತ್ ಕುಮಾರ್ (40) ನಗರದ ಖಾಸಗಿ ಲ್ಯಾಬ್ʼನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಕಾರ್ಯ ನಿರ್ವಹಿಸುತ್ತಿದ್ದಾನೆ.ಇನ್ನು ಈತನ ವಿರುದ್ಧ ಐಪಿಸಿ ಸೆಕ್ಷನ್ 505ರಡಿ ಎಫ್ ಐಆರ್ ದಾಖಲಿಸಲಾಗಿದೆ.
ಮೈಸೂರು ಮೂಲದ ಆರೋಪಿ, ಬಿಪಿನ್ ರಾವತ್ ಅವ್ರ ಸಾವನ್ನ ಸಂಭ್ರಮಿಸಿ ಫೇಸ್ ಬುಕ್ʼನಲ್ಲಿ ಪೋಸ್ಟ್ ಹಾಕಿದ್ದ. ಈತ ‘ಬಿಪಿನ್ ರಾವತ್, ಮೋದಿ ಗುಲಾಮತನದ ಒಂದು ತಲೆಮಾರು’, ‘ಚೀನಾ ಭಾರತ ಗಡಿಯಲ್ಲಿ ಬಂದು ಹಳ್ಳಿಗಳನ್ನ ನಿರ್ಮಿಸಿದಾಗ ಮೋದಿಯಂತೆ ಬುಡಬುಡಿಕೆ ಹೇಳಿಕೆ ಕೊಟ್ಟ ವ್ಯಕ್ತಿ, ರಾವತ್ ಸಾವಿನಿಂದ ದೇಶವಂತೂ ಪಾರಾಗಿದೆ ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದ. ಈ ಕುರಿತು ಒಂದು ಪ್ರಕರಣ ಮಂಗಳೂರಿನಲ್ಲಿ ದಾಖಲಾಗಿದ್ದು, ಸಧ್ಯ ಈ ಲ್ಯಾಬ್ ಟೆಕ್ನಿಷಿಯನ್ʼನನ್ನ ಪೊಲೀಸರು ಬಂಧಿಸಿದ್ದಾರೆ.
ರಾವತ್ ಅವರನ್ನು ಸಾವಿನ ಕುರಿತು ಆಕ್ಷೇಪಾರ್ಹ ಸ್ಟೇಟಸ್ ಪೋಸ್ಟ್ ಮಾಡಿದ್ದವರ ಪೈಕಿ ನಿನ್ನೆ ಮಧ್ಯಪ್ರದೇಶ ಮತ್ತು ಗುಜರಾತ್ನಲ್ಲಿ ತಲಾ ಒಬ್ಬರನ್ನು ಬಂಧಿಸಲಾಗಿತ್ತು. ಹಾಗೆಯೇ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕರ್ನಾಟಕದ ಟಿ.ಕೆ. ವಸಂತಕುಮಾರ್, ಸುಬ್ಬರಾವ್ ರವಿಕುಮಾರ್ ಅವರು ರಾವತ್ ವಿರುದ್ಧ ಹಾಗೂ ಶ್ರೀನಿವಾಸ ಕಾರ್ಕಳ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹಾಗಾರ ಅಜಿತ್ ದೋವಲ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದು, ಇವರೆಲ್ಲರ ವಿರುದ್ಧ ದೂರು ದಾಖಲಾಗಿತ್ತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ