ಬೆಳಗಾವಿ: ಮತಾಂತರ ನಿಷೇಧದಂತಹ ಕಾಯ್ದೆ ಜಾರಿಗೆ ತಂದು ದೇಶ ವಿಭಜನೆ ಮಾಡಲು ಹೊರಡಬೇಡಿ ಎಂದು ಮಾಜಿ ಸಚಿವ ಕೆ.ಜೆ ಜಾರ್ಜ್ ಹೇಳಿದರು. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದಾರೆ ಬಲವಂತವಾಗಿ ಮತಾಂತರ ಮಾಡುವಂತಿಲ್ಲ ಅಂತ. ಆದ್ರೆ ಇಷ್ಟ ಬಂದಂತ ಧರ್ಮಕ್ಕೆ ಹೋಗಬಹುದು ಅಂತಿದೆ.ಬಲವಂತವಾಗಿ ಮತಾಂತರ ಆಗೋದಕ್ಕೆ ನಮ್ಮದು ವಿರೋಧವಿದೆ ಎಂದರು.
ಈ ಕಾನೂನು ತರುವ ಮೂಲಕ ಕೆಲವರಿಗೆ ನೈತಿಕ ಪೊಲೀಸ್ಗಿರಿಗೆ ಅವಕಾಶ ಮಾಡಿಕೊಟ್ಟಂತೆ ಆಗಲಿದೆ. ಹಿಂದು ಧರ್ಮವಾಗ್ಲಿ ಅಥಾವ ಬೇರೆ ಧರ್ಮವಾಗ್ಲಿ ಶಕ್ತಿಯುಕ್ತವಾಗಿದೆ. ಮೊಗಲರು, ಡಚ್ಚರು, ಪೋರ್ಚುಗೀಸರು ಬಂದರೂ, ಹಿಂದು ಧರ್ಮದ ಜನ ಸಂಖ್ಯೆ ಹೆಚ್ಚಿದೆ. ಕ್ರೈಸ್ತ ಸಮುದಾಯದ ಜನಸಂಖ್ಯೆ ಮೊದಲಗಿಂತ ಕಡಿಮೆ ಇದೆ. ರಾಜಕೀಯದ ದುರುದ್ದೇಶದಿಂದ ಈ ಕಾಯ್ದೆ ತರೋದಕ್ಕೆ ಹೊರಟಿದ್ದಾರೆ ಎಂದು ಆರೋಪಿಸಿದರು.
ಇಂಥ ಕಾಯ್ದೆ ತಂದು ದೇಶವಿಭಜನೆ ಮಾಡೋಕೆ ಹೊರಡಬೇಡಿ ಎಂದು ಸಿಎಂ ಹಾಗೂ ಅವರ ಪಕ್ಷದವರಿಗೆ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಕೆಜೆ ಜಾರ್ಜ್ ಹೇಳಿದರು.
ಮತಾಂತರ ನಿಷೇಧ ಕಾಯ್ದೆಯನ್ನು ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ನೇತೃತ್ವದ ಸರಕಾರ ಮಂಡಿಸುವ ಸಾಧ್ಯತೆ ಇದೆ. ಈ ಬಗ್ಗೆ ಬಿಜೆಪಿಯ ಪ್ರಮುಖ ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಮಸೂದೆ ಮಂಡಿಸದಂತೆ ವಿರೋಧ ವ್ಯಕ್ತಪಡಿಸಿದೆ. ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ