ಬೆಳಗಾವಿ: ಮತಾಂತರ ನಿಷೇಧದಂತಹ ಕಾಯ್ದೆ ಜಾರಿಗೆ ತಂದು ದೇಶ ವಿಭಜನೆ ಮಾಡಲು ಹೊರಡಬೇಡಿ ಎಂದು ಮಾಜಿ ಸಚಿವ ಕೆ.ಜೆ ಜಾರ್ಜ್ ಹೇಳಿದರು. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದಾರೆ ಬಲವಂತವಾಗಿ ಮತಾಂತರ ಮಾಡುವಂತಿಲ್ಲ ಅಂತ. ಆದ್ರೆ ಇಷ್ಟ ಬಂದಂತ ಧರ್ಮಕ್ಕೆ ಹೋಗಬಹುದು ಅಂತಿದೆ.ಬಲವಂತವಾಗಿ ಮತಾಂತರ ಆಗೋದಕ್ಕೆ ನಮ್ಮದು ವಿರೋಧವಿದೆ ಎಂದರು.
ಈ ಕಾನೂನು ತರುವ ಮೂಲಕ ಕೆಲವರಿಗೆ ನೈತಿಕ ಪೊಲೀಸ್ಗಿರಿಗೆ ಅವಕಾಶ ಮಾಡಿಕೊಟ್ಟಂತೆ ಆಗಲಿದೆ. ಹಿಂದು ಧರ್ಮವಾಗ್ಲಿ ಅಥಾವ ಬೇರೆ ಧರ್ಮವಾಗ್ಲಿ ಶಕ್ತಿಯುಕ್ತವಾಗಿದೆ. ಮೊಗಲರು, ಡಚ್ಚರು, ಪೋರ್ಚುಗೀಸರು ಬಂದರೂ, ಹಿಂದು ಧರ್ಮದ ಜನ ಸಂಖ್ಯೆ ಹೆಚ್ಚಿದೆ. ಕ್ರೈಸ್ತ ಸಮುದಾಯದ ಜನಸಂಖ್ಯೆ ಮೊದಲಗಿಂತ ಕಡಿಮೆ ಇದೆ. ರಾಜಕೀಯದ ದುರುದ್ದೇಶದಿಂದ ಈ ಕಾಯ್ದೆ ತರೋದಕ್ಕೆ ಹೊರಟಿದ್ದಾರೆ ಎಂದು ಆರೋಪಿಸಿದರು.
ಇಂಥ ಕಾಯ್ದೆ ತಂದು ದೇಶವಿಭಜನೆ ಮಾಡೋಕೆ ಹೊರಡಬೇಡಿ ಎಂದು ಸಿಎಂ ಹಾಗೂ ಅವರ ಪಕ್ಷದವರಿಗೆ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಕೆಜೆ ಜಾರ್ಜ್ ಹೇಳಿದರು.
ಮತಾಂತರ ನಿಷೇಧ ಕಾಯ್ದೆಯನ್ನು ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ನೇತೃತ್ವದ ಸರಕಾರ ಮಂಡಿಸುವ ಸಾಧ್ಯತೆ ಇದೆ. ಈ ಬಗ್ಗೆ ಬಿಜೆಪಿಯ ಪ್ರಮುಖ ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಮಸೂದೆ ಮಂಡಿಸದಂತೆ ವಿರೋಧ ವ್ಯಕ್ತಪಡಿಸಿದೆ. ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ