ಡಿಸೆಂಬರ್ 16ರಂದು ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯ ಹನುಮಮಾಲಾಧಾರಿಗಳು ಅಂಜನಾದ್ರಿ ಬೆಟ್ಟ ಹತ್ತುತ್ತೇವೆ. ಹನುಮಮಾಲಾಧಾರಿಗಳನ್ನು ತಡೆಯಿರಿ ನೋಡೋಣ ಎಂದು ಶ್ರೀರಾಮಚಂದ್ರಸೇನೆ ವಿಭಾಗೀಯ ಸಂಚಾಲಕ ಸಂಜೀವ್ ಮುರಡಿ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸವಾಲು ಹಾಕಿದ್ದಾರೆ.
ಕೋವಿಡ್ ಹರಡುವ ಹಿನ್ನೆಲ ಹೊರಜಿಲ್ಲೆಯ ಹನುಮಮಾಲಾಧಾರಿಗಳಿಗೆ ಅಂಜನಾದ್ರಿಗೆ ನಿರ್ಬಂಧ ಹೇರಲಾಗಿದೆ. ಚುನಾವಣೆಯ ಪ್ರಚಾರ, ವಿಜಯೋತ್ಸವಕ್ಕಿಲ್ಲದ ನಿರ್ಬಂಧ ಹನುಮಮಾಲಾಧಾರಿಗಳಿಗೆ ಮಾತ್ರ ಯಾಕೆ? ಡಿ 14 ರಂದು ಎಂಎಲ್ ಸಿ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿಯವರು ನಿಮ್ಮ ಕಚೇರಿಯ ಮುಂದೆ ವಿಜಯೋತ್ಸವ ಆಚರಿಸುತ್ತಾರೆ. ಆಗ ತಡೆಯಿಯುತ್ತಿರಾ ಎಂದು ಪ್ರಶ್ನೆ ಮಾಡಿದ್ದಾರೆ.
ಈ ಆದೇಶಿಸಿದ್ದೆ ತಪ್ಪು ಎಂದು ಬೇರೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಳ್ಳಬೇಕು. ಈ ಆದೇಶವಿದ್ದರೂ ನಾವು 3.5 ಸಾವಿರ ಜನ ಹನುಮಮಾಲಾಧಾರಿಗಳು ಅಂಜನಾದ್ರಿ ಹತ್ತುತ್ತವೆ ತಡೆಯಿರಿ ನೋಡೋಣ ಎಂದು ಹೇಳಿದ್ದಾರೆ.
16-12-2021ರಂದು ನಡೆಯುವ ಹನುಮ ಮಾಲಾ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಸದರಿ ಕಾರ್ಯಕ್ರಮದಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 30 ರಿಂದ 40 ಸಾವಿರ ವರೆಗೆ ಮಾಲಾಧಾರಿಗಳು ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆ ಅಂಜನಾದ್ರಿ ಬೆಟ್ಟದಲ್ಲಿ ಪವಮಾನ ಹೋಮಕ್ಕೆ ಅರ್ಚಕರ ವ್ಯವಸ್ಥೆ ಹಾಗೂ ಇತರೆ ಮೂಲಭೂತ ಸೌಕರ್ಯ, ಪಾರ್ಕಿಂಗ್ ಹಾಗೂ ಗಂಗಾವತಿ ನಗರದಿಂದ ಹೊರಡುವ ಸಂಕೀರ್ತನಾ ಯಾತ್ರೆಗೆ ಭದ್ರತೆ ನೀಡುವಂತೆ ಕೋರಿ ಜಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಲಾಗಿತ್ತು.
ಈ ಸಂಬಂಧ ಜಿಲ್ಲಾಡಳಿತ ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರ ಸಭೆ ಗಂಗಾವತಿ ಹಾಗೂ ಹನುಮಮಾಲಾ ಕಾರ್ಯಕ್ರಮದ ಆಯೋಜಕರ ಜೊತೆ ಡಿಸೆಂಬರ್ 9ರಂದು ಸಭೆ ನಡೆಸಿತ್ತು.
ಈ ಸಭೆಯಲ್ಲಿ ಕೋವಿಡ್-19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮತ್ತು ಸೋಂಕು ಪ್ರಸರಣ ನಿಯಂತ್ರಿಸುವ ನಿಟ್ಟಿನಲ್ಲಿ ಸದರಿ ಕಾರ್ಯಕ್ರಮವನ್ನು ನಿರ್ಬಂಧಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಡಳಿತ ಹೇಳಿತ್ತು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ