ಡಿಸೆಂಬರ್ 16ರಂದು ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯ ಹನುಮಮಾಲಾಧಾರಿಗಳು ಅಂಜನಾದ್ರಿ ಬೆಟ್ಟ ಹತ್ತುತ್ತೇವೆ. ಹನುಮಮಾಲಾಧಾರಿಗಳನ್ನು ತಡೆಯಿರಿ ನೋಡೋಣ ಎಂದು ಶ್ರೀರಾಮಚಂದ್ರಸೇನೆ ವಿಭಾಗೀಯ ಸಂಚಾಲಕ ಸಂಜೀವ್ ಮುರಡಿ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸವಾಲು ಹಾಕಿದ್ದಾರೆ.
ಕೋವಿಡ್ ಹರಡುವ ಹಿನ್ನೆಲ ಹೊರಜಿಲ್ಲೆಯ ಹನುಮಮಾಲಾಧಾರಿಗಳಿಗೆ ಅಂಜನಾದ್ರಿಗೆ ನಿರ್ಬಂಧ ಹೇರಲಾಗಿದೆ. ಚುನಾವಣೆಯ ಪ್ರಚಾರ, ವಿಜಯೋತ್ಸವಕ್ಕಿಲ್ಲದ ನಿರ್ಬಂಧ ಹನುಮಮಾಲಾಧಾರಿಗಳಿಗೆ ಮಾತ್ರ ಯಾಕೆ? ಡಿ 14 ರಂದು ಎಂಎಲ್ ಸಿ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿಯವರು ನಿಮ್ಮ ಕಚೇರಿಯ ಮುಂದೆ ವಿಜಯೋತ್ಸವ ಆಚರಿಸುತ್ತಾರೆ. ಆಗ ತಡೆಯಿಯುತ್ತಿರಾ ಎಂದು ಪ್ರಶ್ನೆ ಮಾಡಿದ್ದಾರೆ.
ಈ ಆದೇಶಿಸಿದ್ದೆ ತಪ್ಪು ಎಂದು ಬೇರೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಳ್ಳಬೇಕು. ಈ ಆದೇಶವಿದ್ದರೂ ನಾವು 3.5 ಸಾವಿರ ಜನ ಹನುಮಮಾಲಾಧಾರಿಗಳು ಅಂಜನಾದ್ರಿ ಹತ್ತುತ್ತವೆ ತಡೆಯಿರಿ ನೋಡೋಣ ಎಂದು ಹೇಳಿದ್ದಾರೆ.
16-12-2021ರಂದು ನಡೆಯುವ ಹನುಮ ಮಾಲಾ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಸದರಿ ಕಾರ್ಯಕ್ರಮದಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 30 ರಿಂದ 40 ಸಾವಿರ ವರೆಗೆ ಮಾಲಾಧಾರಿಗಳು ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆ ಅಂಜನಾದ್ರಿ ಬೆಟ್ಟದಲ್ಲಿ ಪವಮಾನ ಹೋಮಕ್ಕೆ ಅರ್ಚಕರ ವ್ಯವಸ್ಥೆ ಹಾಗೂ ಇತರೆ ಮೂಲಭೂತ ಸೌಕರ್ಯ, ಪಾರ್ಕಿಂಗ್ ಹಾಗೂ ಗಂಗಾವತಿ ನಗರದಿಂದ ಹೊರಡುವ ಸಂಕೀರ್ತನಾ ಯಾತ್ರೆಗೆ ಭದ್ರತೆ ನೀಡುವಂತೆ ಕೋರಿ ಜಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಲಾಗಿತ್ತು.
ಈ ಸಂಬಂಧ ಜಿಲ್ಲಾಡಳಿತ ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರ ಸಭೆ ಗಂಗಾವತಿ ಹಾಗೂ ಹನುಮಮಾಲಾ ಕಾರ್ಯಕ್ರಮದ ಆಯೋಜಕರ ಜೊತೆ ಡಿಸೆಂಬರ್ 9ರಂದು ಸಭೆ ನಡೆಸಿತ್ತು.
ಈ ಸಭೆಯಲ್ಲಿ ಕೋವಿಡ್-19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮತ್ತು ಸೋಂಕು ಪ್ರಸರಣ ನಿಯಂತ್ರಿಸುವ ನಿಟ್ಟಿನಲ್ಲಿ ಸದರಿ ಕಾರ್ಯಕ್ರಮವನ್ನು ನಿರ್ಬಂಧಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಡಳಿತ ಹೇಳಿತ್ತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ