ಮಂಗಳೂರು:ಉಪ್ಪಿನಂಗಡಿಯಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ನಿನ್ನೆ ಪಿ.ಎಫ್. ಐ.ಸಂಘಟನೆಯ ಮೂವರು ನಾಯಕರನ್ನು ವಿಚಾರಣೆ ನೆಪದಲ್ಲಿ ಬಂಧಿಸಿದ್ದನ್ನು ವಿರೋಧಿಸಿ ಮತ್ತು ಬಂಧಿತ ನಾಯಕರನ್ನು ಬಿಡುಗಡೆ ಗೊಳಿಸಬೇಕೆಂದು ಆಗ್ರಹಿಸಿ ಇಂದು ಸಂಘಟನೆಯ ಸದಸ್ಯರು ಉಪ್ಪಿನಂಗಡಿ ಪೊಲೀಸು ಸ್ಟೇಶನ್ ಎದುರಿಗೆ ಜಮಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸಿದ್ದರು.
ಈ ವೇಳೆ ಪೊಲೀಸರು ಅಪ್ರಚೋಧಿತವಾಗಿ ಪ್ರತಿಭಟನಾಕಾರರ ಮೇಲೆ ಅನ್ಯಾಯವಾಗಿ ಲಾಠಿ ಚಾರ್ಜ್ ಮಾಡಿದ್ದು, ಅಮಾಯಕ ಪ್ರತಿಭಟನಾಕಾರರು ಗಂಭೀರ ಗಾಯಗೊಂಡಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಆತೂರ್ ಇಬ್ರಾಹಿಂ ತಂಙ್ಞಳ್ ರವರು ತೀವ್ರ ಗಾಯಗೊಂಡು ಗಂಭೀರಾವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ಈ ದೌರ್ಜನ್ಯವು ಖಂಡನೀಯವಾಗಿದೆ.
ಪೊಲೀಸರು ಶಾಂತಿ ಕಾಪಾಡುವುದರ ಹೊರತು, ಹಿಂಸೆಯನ್ನು ಪ್ರಚೋದಿಸಿದ್ದಾರೆ. ಪೊಲೀಸರ ಈ ದೌರ್ಜನ್ಯವನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದರ ಅಧ್ಯಕ್ಷರಾದ ಕೆ.ಅಶ್ರಫ್.ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸುಮೊಟೊ ದುರ್ಬಳಕೆ ಮತ್ತು ಪಕ್ಷ ಪಾತೀಯ ನಿಲುವನ್ನು ಖಂಡಿಸಿ KMJ SYS SSF ಸಮಿತಿ ವತಿಯಿಂದ ಕಮಿಷನರ್ ಭೇಟಿ ಮಾಡಿ ಮನವಿ
ಸಾರ್ವಜನಿಕ ಸ್ಥಳದಲ್ಲಿ ನಮಾಝ್: ಘಟನೆಯಲ್ಲಿ ಕೇಸ್ ದಾಖಲಿಸಿದ್ದು ಅಚ್ಚರಿ ಮೂಡಿಸಿದೆ- ಶಾಫಿ ಸಅದಿ
ಮುಖ್ಯಮಂತ್ರಿಯನ್ನು ಭೇಟಿಮಾಡಿ ವಿವಿಧ ಭೇಡಿಕೆಗಳನ್ನಿಟ್ಟ ಸುನ್ನೀ ಸಂಘಟನಾ ನಾಯಕರು
ಪಾನಕ್ಕಾಡ್ ಹೈದರಾಲಿ ತಂಙ್ಞಳ್ ನಿಧನ- ಕೆ.ಅಶ್ರಫ್ ಮುಸ್ಲಿಮ್ ಒಕ್ಕೂಟ ಸಂತಾಪ
SDPI ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಗಣರಾಜ್ಯೋತ್ಸವ ದಿನಾಚರಣೆ
ವಿವಾಹ ಸಂದರ್ಭ ವರನಿಂದ ಮಾರು ವೇಷ: ಧಾರ್ಮಿಕ ನಂಬಿಕೆಗೆ ಅವಹೇಳನ- ಮುಸ್ಲಿಮ್ ಒಕ್ಕೂಟ ಖಂಡನೆ
ಕಾಣಿಕೆ ಡಬ್ಬಿಗಳನ್ನು ಅಪವಿತ್ರಗೊಳಿಸುತ್ತಿದ್ದ ದೇವದಾಸ್ ದೇಸಾಯಿ ಬಂಧನ
ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್: ಅಕ್ರಮ ಟೋಲ್ ಸಂಗ್ರಹ ನಿಲ್ಲಿಸುವಂತೆ ಹೋರಾಟ ಸಮಿತಿ ಆಗ್ರಹ
ಎಸ್ಡಿಪಿಐ ಮಂಗಳೂರು(ಉಳ್ಳಾಲ)ವಿಧಾನಸಭಾ ಕ್ಷೇತ್ರ ಸಮಿತಿ: ನಾಯಕತ್ವ ತರಬೇತಿ ಶಿಬಿರ
ಮಗುವನ್ನು ಬದಲಿಸಿಲ್ಲ- ಲೇಡಿಗೋಶನ್ ಆಸ್ಪತ್ರೆ ಸ್ಪಷ್ಟನೆ