ಬೆಳಗಾವಿ (ಸುವರ್ಣ ವಿಧಾನಸೌಧ) ಡಿ.17: ಅತ್ಯಾಚಾರ ತಡೆಯಲು ಸಾಧ್ಯವಿಲ್ಲದಿದ್ದರೆ ಎಂಜಾಯ್ ಮಾಡಿ ಎಂಬ ಮಾತು ಆಡಿದ್ದ ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಇಂದು ಮಹಿಳೆಯರ ಕ್ಷಮೆ ಕೋರಿದ್ದಾರೆ. ಮಾಜಿ ಸಭಾಧ್ಯಕ್ಷರಾದವರು ಮಹಿಳೆಯರ ಬಗ್ಗೆ ಕೇವಲ ಮಾತನಾಡಿದ್ದಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಇಂದು ಬೆಳಗ್ಗೆ ಸಭೆ ಆರಂಭಗೊಳ್ಳುತ್ತಿದ್ದಂತೆ ಎದ್ದು ನಿಂತ ರಮೇಶ್ ಕುಮಾರ್, “ನಾನು ನಿನ್ನೆ ಕಲಾಪ ನಡೆಯುವ ವೇಳೆ ಭಾಷಣಾಕಾರರ ಪಟ್ಟಿ ಜಾಸ್ತಿ ಆಗುತ್ತಿದೆ. ಸಭಾಧ್ಯಕ್ಷರ ಅನುಭವಿಸುತ್ತಿರುವ ಸಮಯ ಹೊಂದಾಣಿಕೆ ಸಮಸ್ಯೆ ಬಗ್ಗೆ ನಾನು ಕೂಡ ಇದನ್ನು ಅನುಭವಿಸುತ್ತಿದ್ದೇನೆ ಎಂಬ ನೋವನ್ನು ಸಭಾಧ್ಯಕ್ಷ ಕಾಗೇರಿಯವರಿಗೆ ಹೇಳಿಕೊಂಡೆ. ನಾನು ಇಂಗ್ಲಿಷ್ ಭಾಷೆಯ ಒಂದು ಮಾತನ್ನು ಉಲ್ಲೇಖ ಮಾಡಿದೆ. ಹೆಣ್ಣಿಗೆ ಅಪಮಾನ ಮಾಡುವುದು, ಸದದನ ಗೌರವ ಕಡಿಮೆ ಮಾಡುವುದು, ಲಘುವಾಗಿ ವರ್ತಿಸಬೇಕೆಂದು ಯಾವ ದುರುದ್ದೇಶ ಇರಲಿಲ್ಲ. ಯಾವ ಸನ್ನಿವೇಶದಲ್ಲಿ ಏನು ಹೇಳಿದೆ ಅನ್ನೋದು ಹೊರಟು ಹೋಗುತ್ತೆ. ನಾನು ನನ್ನನ್ನು ರಕ್ಷಣೆ ಮಾಡಿಕೊಳ್ಳುತ್ತಿಲ್ಲ. ಕಲಾಪ ನಡೆಯುವ ಸಂದರ್ಭದಲ್ಲಿ ನಾನು ಉಲ್ಲೇಖ ಮಾಡಿರುವ ಮಾತುಗಳು ಯಾರಿಗೆ ಎಲ್ಲೇ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ” ಎಂದು ರಮೇಶ್ ಕುಮಾರ್ ಹೇಳಿದರು.
“ನನಗೆ ಯಾವ ಪ್ರತಿಷ್ಠೆ ಇಲ್ಲ. ಸಾಮಾನ್ಯ ಹಿನ್ನೆಲೆಯಿಂದ ಬಂದವ್ನು. ಸದ ಕಾಲ ಗೌರವವಾಗಿ ನಡೆದುಕೊಳ್ಳಬೇಕೆಂದುವನು. ಯಾರಿಗೇನು ಸವಾಲು ಮಾಡಬೇಕಂತಿಲ್ಲ. ನನಗೆ ಯಾವ ಪ್ರತಿಷ್ಠೆ ಇಲ್ಲ. ನಾನು ಹೇಳುತ್ತಿದ್ದಾಗ ನೀವು (ಕಾಗೇರಿ) ನಗ್ತಾ ಇದ್ದೀರಿ ತಮ್ಮನ್ನು ಅಪರಾಧಿ ಮಾಡಿದ್ದಾರೆ. ತಮ್ಮದು ಆ ಉದ್ದೇಶ ಇರಲಿಕ್ಕಿಲ್ಲ. ನಾನು ಆ ಸಂದರ್ಭದಲ್ಲಿ ಉಲ್ಲೇಖ ಮಾಡಿರುವ ಮಾತುಗಳಿಂದ ಮಹಿಳೆಯರಿಗೆ ಒಂದು ವೇಳೆ ನೋವಾಗಿದ್ದರೆ ವಿಷಾಧ ವ್ಯಕ್ತಪಡಿಸುತ್ತೇನೆ. ನನ್ನಿಂದ ಅಪರಾಧ ಆಗಿದೆಯೆಂದು ಈಗಾಗಲೇ ತೀರ್ಪು ಕೊಟ್ಟು ಬಿಟ್ಟಿದ್ದಾರೆ. ಆದ್ದರಿಂದ ನಾನು ಕ್ಷಮೆ ಕೋರುತ್ತೇನೆ. ಈ ಘಟನೆಗೆ ಇಲ್ಲಿಗೆ ಸುಖಾಂತ್ಯ ಹಾಡಿ ಕಲಾಪ ನಡೆಸಿಕೊಂಡು ಹೋಗೋಣ. ವಿಶೇಷವಾಗಿ ಹೆಣ್ಣು ಕುಲಕ್ಕೆ ನೋವಾಗಿದ್ದರೆ, ನನಗೆ ಯಾವ ಪ್ರತಿಷ್ಠೆ ಇಲ್ಲದೆ, ಪ್ರಾಮಾಣಿಕವಾಗಿ ಶುದ್ಧ ಹೃದಯದಿಂದ ವಿಷಾಧ ವ್ಯಕ್ತಪಡಿಸುತ್ತೇನೆ” ಎಂದರು.
ಬಳಿಕ ಮಾತನಾಡಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಈ ವಿಚಾರವನ್ನು ಬೆಳಸೋದು ಬೇಡ. ನಾವೆಲ್ಲರೂ ಒಂದು ಕುಟುಂಬದಲ್ಲಿರುವಂತಹವರು. ನಮಗೂ ಸಂಸಾರಿಕ ಭಾವನಾತ್ಮಕ ಸಂಬಂಧ ಇದ್ದೆ ಇದೆ. ನಿನ್ನೆ ನಡೆದ ಘಟನೆಯಿಂದ ರಮೇಶ್ ಕುಮಾರ್ ಅವರ ಮಾತು ವಿವಾದ ಸ್ವರೂಪ ಪಡೆದುಕೊಂಡಿದೆ. ನಮ್ಮ ಸದನದಲ್ಲಿ ನಾವೆಲ್ಲರೂ ಮಹಿಳೆಯರ ಬಗ್ಗೆ ಯಾವ ಗೌರವದ ಸ್ಥಾನ ಇದೆಯೋ ಆ ಸ್ಥಾನವನ್ನು ನಾವೆಲ್ಲರೂ ಇಟ್ಟುಕೊಂಡವರೇ. ಅದನ್ನು ಕಾಪಾಡುವುದನ್ನು ಹಾಗೂ ಹೆಚ್ಚಿಸುವುದಕ್ಕೆ ಬದ್ಧರಾಗಿರುತ್ತೇವೆ. ಇಲ್ಲಿ ನಡೆದ ಘಟನೆಯನ್ನು ಬೆಳೆಸುವುದು ಬೇಡ ಎಂದು ವಿವಾದಕ್ಕೆ ಸ್ಪೀಕರ್ ಕಾಗೇರಿ ತೆರೆ ಎಳೆದರು.
ಮಹಿಳೆ ಅತ್ಯಾಚಾರದಿಂದ ಪಾರಾಗಲು ಸಾಧ್ಯವಿಲ್ಲ ಎಂದು ಗೊತ್ತಾದಾಗ ಆ ಪರಿಸ್ಥಿತಿಯನ್ನು ಸಂತಸದಿಂದ ಅನುಭವಿಸಬೇಕು (“Actually there is a saying, when rape is inevitable laydown and enjoy it. That’s the exactly the position in to which you are”) ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಿನ್ನೆ ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ