ನವದೆಹಲಿ, ಡಿ.17: ಕೇಂದ್ರ ಸರ್ಕಾರವು ಕೆಲವು ತಪ್ಪುಗಳನ್ನು ಮಾಡಿರಬಹುದು. ಆದರೆ ಕೇಂದ್ರದ ಉದ್ದೇಶವೇ ತಪ್ಪು ಎಂದು ಹೇಳಲಾಗದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ನವದೆಹಲಿಯಲ್ಲಿ ಜರುಗಿದ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ (ಎಫ್ಐಸಿಸಿಐ) 94ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದರು
ಕಳೆದ 7 ವರ್ಷಗಳಲ್ಲಿ ದೇಶದಲ್ಲಿ ಬಹಳಷ್ಟು ಬದಲಾವಣೆಗಳಾಗಿರುವುದನ್ನು ವಿಮರ್ಶಕರು ಸಹ ಒಪ್ಪಿಕೊಳ್ಳುತ್ತಾರೆ. ನಮ್ಮ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪ ಬಂದಿಲ್ಲ. ಕೆಲವು ತಪ್ಪು ನಿರ್ಧಾರ ಕೈಗೊಂಡಿರಬಹು. ಆದರೆ ನಮ್ಮ ಉದ್ದೇಶವೇ ತಪ್ಪು ಎಂದು ಯಾರೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.
ಬಹುಪಕ್ಷೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ನಂಬಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಪುನಃ ಸ್ಥಾಪಿಸಿದ್ದಾರೆ ಎಂದು ಶಾ ಹೇಳಿದರು. ಮೋದಿ ಸರ್ಕಾರ ಅಧಿಕಾರ ವಹಿಸಿಕೊಂಡಾಗ ಜನರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಳ್ಳಲು ಪ್ರಾರಂಭಿಸಿದರು. ನಮ್ಮ ಬಹುಪಕ್ಷೀಯ ಪ್ರಜಾಪ್ರಭುತ್ವ ವ್ಯವಸ್ಥೆಯು ವಿಫಲವಾಗುತ್ತಿದೆಯೇ ಎಂದು ದೇಶವು ಆಶ್ಚರ್ಯ ಪಡುತ್ತಿತ್ತು. ನಮ್ಮ ಸರ್ಕಾರದ ದೊಡ್ಡ ಸಾಧನೆ ಎಂದರೆ ಪ್ರಧಾನಿ ಮೋದಿಯವರು ನಮ್ಮ ಬಹುಪಕ್ಷದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ನಂಬಿಕೆಯನ್ನು ಬಲಪಡಿಸಿದ್ದಾರೆ ಎಂದರು.
















ಇನ್ನಷ್ಟು ಸುದ್ದಿಗಳು
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ