ಅಬುಧಾಬಿ: ‘ಜೆರುಸಲೇಮ್ ಎಂದೆದೂ ಫಲಸ್ತೀನ್ ರಾಜಧಾನಿ’ ಎಂಬ ಘೋಷವಾಕ್ಯದೊಂದಿಗೆ ಈ ತಿಂಗಳ 11,12 ದಿನಾಂಕಗಳಲ್ಲಿ ಜೆರುಸಲೇಮ್ ನಲ್ಲಿ ನಡೆಯುವ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಲು ಹೊರಟಿರುವ ಅಖಿಲ ಭಾರತ ಸುನ್ನೀ ಉಲಮಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಅವರನ್ನು ಯುಎಇ ಫಲಸ್ತೀನ್ ದೂತವಾಸ ಕೇಂದ್ರದಲ್ಲಿ ಬೀಳ್ಕೊಡಲಾಯ್ತು.
ಫಲಸ್ತೀನ್ ಪ್ರಾಧಿಕಾರದ ಅಧೀನದಲ್ಲಿ ನಡೆಯುವ ಸಮ್ಮೇಳನದಲ್ಲಿ,ಫಲಸ್ತೀನ್ ಅಧ್ಯಕ್ಷ ಮಹ್ಮೂದ್ ಅಬ್ಬಾಸ್ ರ ಪ್ರತ್ಯೇಕ ಆಮಂತ್ರಣ ಪ್ರಕಾರ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ.
ಅಬುಧಾಬಿಯ ಫಲಸ್ತೀನ್ ದೂತವಾಸ ಕೇಂದ್ರದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಯುಎಇ ಫಲಸ್ತೀನ್ ರಾಯಭಾರಿ ಉಸಾಮ್ ಮಸಾಲಿಹ್, ನಿರ್ವಾಹಕ ಲುಅಯ್ಯ್ ಮೂಸಾ, ಇಂಡೋ ಅರಬ್ ಸಾಂಸ್ಕೃತಿಕ ನಿಯೋಗದ ಕಾರ್ಯದರ್ಶಿ ಡಾ.ಅಮೀನ್ ಮುಹಮ್ಮದ್ ಹಸನ್ ಸಖಾಫಿ, ಮರ್ಕಝ್ ಅಬುಧಾಬಿ ಅಧ್ಯಕ್ಷ ಉಸ್ಮಾನ್ ಸಖಾಫಿ ತಿರುವತ್ರ, ಮರ್ಕಝ್ ಮೀಡಿಯಾ ಮೇನೇಜರ್ ಮುನೀರ್ ಪಾಂಡ್ಯಾಲ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ