ಕೋಝಿಕ್ಕೋಡ್ | ಅಲಪ್ಪುಝದಲ್ಲಿ ಕೆಲವೇ ಗಂಟೆಗಳಲ್ಲಿ ನಡೆದ ಎರಡು ಕೊಲೆಗಳು ಅತ್ಯಂತ ಖಂಡನೀಯ ಎಂದು ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು. ಅಲ್ಲದೆ,ಈ ಅಪರಾಧ ಕೃತ್ಯಗಳನ್ನು ಎಸಗಿದ ದುಷ್ಕರ್ಮಿಗಳಿಗೆ ಸೂಕ್ತ ಶಿಕ್ಷೆಯಾಗಬೇಕೆಂದು ಅವರು ಒತ್ತಾಯಿಸಿದರು.
ಕೋಮುವಾದಿ ನಡೆಗಳು ಯಾರ ಕಡೆಯಿಂದಲೂ ಸ್ವೀಕಾರಾರ್ಹವಲ್ಲ. ಅವರು ಕತ್ತಿ ಮಸೆಯುವುದನ್ನು ನಿಲ್ಲಿಸಬೇಕು.ಇವರಿಗೆ ಜನರನ್ನು ಅನ್ಯಾಯವಾಗಿ ಕೊಲ್ಲುವ ಅಧಿಕಾರ ಕೊಟ್ಟವರು ಯಾರು? ಆ ಎರಡು ಕುಟುಂಬದ ಮಕ್ಕಳನ್ನು ಮತ್ತು ಅವರ ಆತ್ಮೀಯರನ್ನು ಯಾವ ರೀತಿಯಲ್ಲಿ ಸಮಾಧಾನ ಪಡಿಸುವರು? ಕೆಲವು ನಾಯಕರ ಅಪಕ್ವ ಪ್ರತಿಕ್ರಿಯೆಗಳು ಕೂಡ ತುಂಬಾ ನೋವುಂಟು ಮಾಡುತ್ತಿದೆ.
ಕೇರಳದಲ್ಲಿ ಈ ಅಪಾಯಕಾರಿ ಚಳುವಳಿಯನ್ನು ತಡೆಯಲು ಸರ್ಕಾರ ಮತ್ತು ರಾಜಕೀಯ ಮತ್ತು ಸಾಮಾಜಿಕ ಮುಖಂಡರು ಒಟ್ಟಾಗಿ ಕೆಲಸ ಮಾಡಬೇಕು. ದೇಶದ ಶಾಂತಿ ಕದಡುವವರ ವಿರುದ್ಧ ಯಾವುದೇ ರಾಜಕೀಯ ಪಕ್ಷ ಭೇದವಿಲ್ಲದೆ, ಕ್ರಮ ಕೈಗೊಳ್ಳಬೇಕು. ಇಂತಹ ಅಪರಾಧಗಳ ವಿರುದ್ಧ ಕಾನೂನು ಪರಿಪಾಲಕರು ಸಂಪೂರ್ಣ ಜಾಗರೂಕರಾಗಿರಬೇಕು ಎಂದು ಕಾಂತಪುರಂ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ