ಕೋಝಿಕ್ಕೋಡ್ | ಅಲಪ್ಪುಝದಲ್ಲಿ ಕೆಲವೇ ಗಂಟೆಗಳಲ್ಲಿ ನಡೆದ ಎರಡು ಕೊಲೆಗಳು ಅತ್ಯಂತ ಖಂಡನೀಯ ಎಂದು ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು. ಅಲ್ಲದೆ,ಈ ಅಪರಾಧ ಕೃತ್ಯಗಳನ್ನು ಎಸಗಿದ ದುಷ್ಕರ್ಮಿಗಳಿಗೆ ಸೂಕ್ತ ಶಿಕ್ಷೆಯಾಗಬೇಕೆಂದು ಅವರು ಒತ್ತಾಯಿಸಿದರು.
ಕೋಮುವಾದಿ ನಡೆಗಳು ಯಾರ ಕಡೆಯಿಂದಲೂ ಸ್ವೀಕಾರಾರ್ಹವಲ್ಲ. ಅವರು ಕತ್ತಿ ಮಸೆಯುವುದನ್ನು ನಿಲ್ಲಿಸಬೇಕು.ಇವರಿಗೆ ಜನರನ್ನು ಅನ್ಯಾಯವಾಗಿ ಕೊಲ್ಲುವ ಅಧಿಕಾರ ಕೊಟ್ಟವರು ಯಾರು? ಆ ಎರಡು ಕುಟುಂಬದ ಮಕ್ಕಳನ್ನು ಮತ್ತು ಅವರ ಆತ್ಮೀಯರನ್ನು ಯಾವ ರೀತಿಯಲ್ಲಿ ಸಮಾಧಾನ ಪಡಿಸುವರು? ಕೆಲವು ನಾಯಕರ ಅಪಕ್ವ ಪ್ರತಿಕ್ರಿಯೆಗಳು ಕೂಡ ತುಂಬಾ ನೋವುಂಟು ಮಾಡುತ್ತಿದೆ.
ಕೇರಳದಲ್ಲಿ ಈ ಅಪಾಯಕಾರಿ ಚಳುವಳಿಯನ್ನು ತಡೆಯಲು ಸರ್ಕಾರ ಮತ್ತು ರಾಜಕೀಯ ಮತ್ತು ಸಾಮಾಜಿಕ ಮುಖಂಡರು ಒಟ್ಟಾಗಿ ಕೆಲಸ ಮಾಡಬೇಕು. ದೇಶದ ಶಾಂತಿ ಕದಡುವವರ ವಿರುದ್ಧ ಯಾವುದೇ ರಾಜಕೀಯ ಪಕ್ಷ ಭೇದವಿಲ್ಲದೆ, ಕ್ರಮ ಕೈಗೊಳ್ಳಬೇಕು. ಇಂತಹ ಅಪರಾಧಗಳ ವಿರುದ್ಧ ಕಾನೂನು ಪರಿಪಾಲಕರು ಸಂಪೂರ್ಣ ಜಾಗರೂಕರಾಗಿರಬೇಕು ಎಂದು ಕಾಂತಪುರಂ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ