ಕೋಝಿಕ್ಕೋಡ್ | ಅಲಪ್ಪುಝದಲ್ಲಿ ಕೆಲವೇ ಗಂಟೆಗಳಲ್ಲಿ ನಡೆದ ಎರಡು ಕೊಲೆಗಳು ಅತ್ಯಂತ ಖಂಡನೀಯ ಎಂದು ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು. ಅಲ್ಲದೆ,ಈ ಅಪರಾಧ ಕೃತ್ಯಗಳನ್ನು ಎಸಗಿದ ದುಷ್ಕರ್ಮಿಗಳಿಗೆ ಸೂಕ್ತ ಶಿಕ್ಷೆಯಾಗಬೇಕೆಂದು ಅವರು ಒತ್ತಾಯಿಸಿದರು.
ಕೋಮುವಾದಿ ನಡೆಗಳು ಯಾರ ಕಡೆಯಿಂದಲೂ ಸ್ವೀಕಾರಾರ್ಹವಲ್ಲ. ಅವರು ಕತ್ತಿ ಮಸೆಯುವುದನ್ನು ನಿಲ್ಲಿಸಬೇಕು.ಇವರಿಗೆ ಜನರನ್ನು ಅನ್ಯಾಯವಾಗಿ ಕೊಲ್ಲುವ ಅಧಿಕಾರ ಕೊಟ್ಟವರು ಯಾರು? ಆ ಎರಡು ಕುಟುಂಬದ ಮಕ್ಕಳನ್ನು ಮತ್ತು ಅವರ ಆತ್ಮೀಯರನ್ನು ಯಾವ ರೀತಿಯಲ್ಲಿ ಸಮಾಧಾನ ಪಡಿಸುವರು? ಕೆಲವು ನಾಯಕರ ಅಪಕ್ವ ಪ್ರತಿಕ್ರಿಯೆಗಳು ಕೂಡ ತುಂಬಾ ನೋವುಂಟು ಮಾಡುತ್ತಿದೆ.
ಕೇರಳದಲ್ಲಿ ಈ ಅಪಾಯಕಾರಿ ಚಳುವಳಿಯನ್ನು ತಡೆಯಲು ಸರ್ಕಾರ ಮತ್ತು ರಾಜಕೀಯ ಮತ್ತು ಸಾಮಾಜಿಕ ಮುಖಂಡರು ಒಟ್ಟಾಗಿ ಕೆಲಸ ಮಾಡಬೇಕು. ದೇಶದ ಶಾಂತಿ ಕದಡುವವರ ವಿರುದ್ಧ ಯಾವುದೇ ರಾಜಕೀಯ ಪಕ್ಷ ಭೇದವಿಲ್ಲದೆ, ಕ್ರಮ ಕೈಗೊಳ್ಳಬೇಕು. ಇಂತಹ ಅಪರಾಧಗಳ ವಿರುದ್ಧ ಕಾನೂನು ಪರಿಪಾಲಕರು ಸಂಪೂರ್ಣ ಜಾಗರೂಕರಾಗಿರಬೇಕು ಎಂದು ಕಾಂತಪುರಂ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ