ಬೆಳಗಾವಿ, ಡಿ.20: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರಾಜಕತೆ ತಾರಕಕ್ಕೇರಿದ್ದು, ಈ ಬಗ್ಗೆ ಸದನದಲ್ಲಿ ಧ್ವನಿ ಎತ್ತುವಂತೆ ಕೋರಿ ಕೆ.ಅಶ್ರಫ್ ನೇತೃತ್ವದ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ನಿಯೋಗ ಇಂದು ಬೆಳಗಾವಿಯಲ್ಲಿ ವಿರೋಧ ಪಕ್ಷ ನಾಯಕರಾದ, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಸಿದ್ಧರಾಮಯ್ಯ ರವರನ್ನು ಭೇಟಿ ಮಾಡಿತು.
ದ.ಕ.ಜಿಲ್ಲೆಯಲ್ಲಿ ಇತ್ತೀಚೆಗಿನ ವರ್ಷಗಳಲ್ಲಿ ನಿರಂತರವಾಗಿ ನಡೆಯುತ್ತಿರುವ,ಶಾಂತಿ ಭಂಗ ಪ್ರಯತ್ನ, ಅಹಿತಕರ ಘಟನೆಗಳು, ಮತೀಯ ಉದ್ವಿಗ್ನತೆ, ನೈತಿಕ ಪೊಲೀಸು ಗಿರಿ, ಚೂರಿ ಇರಿತ, ಗುಂಪು ಹಲ್ಲೆ, ಪೊಲೀಸು ದೌರ್ಜನ್ಯ, ಉಪ್ಪಿನಂಗಡಿ ಪೊಲೀಸರಿಂದ ಶಾಂತಿಯುತ ಪ್ರತಿಭಟನಾಕಾರರ ಮೇಲೆ ಅಸಾಂವಿಧಾನಿಕ ಲಾಠಿ ದೌರ್ಜನ್ಯ , ಧಾರ್ಮಿಕ ಕೇಂದ್ರಗಳ ಮೇಲೆ ಧಾಳಿ ಇತ್ಯಾದಿ ವಿಷಯಗಳ ಮೇಲೆ ಸದನದಲ್ಲಿ ದ್ವನಿ ಎತ್ತಲು ಮತ್ತು ಜಿಲ್ಲೆಯ ಸಮಸ್ಯೆಗಳನ್ನು ಸರಕಾರದ ಮುಂದೆ ಪ್ರತಿನಿಧಿಸುವ ಕುರಿತು ಮುಸ್ಲಿಂ ಒಕ್ಕೂಟ ನಿಯೋಗವು ಸಿದ್ದರಾಮಯ್ಯರೊಂದಿಗೆ ಚರ್ಚಿಸಿತು.
ಭೇಟಿ ಮಾಡಿದ ನಿಯೋಗಕ್ಕೆ, ಈ ಬಗ್ಗೆ ಸ್ಪಂದಿಸುವುದಾಗಿ ಮತ್ತು ಸದನದಲ್ಲಿ ಧ್ವನಿ ಎತ್ತುವ ಭರವಸೆ ನೀಡಿದರು ಮತ್ತು ಮುಂದೆ ದ.ಕ.ಜಿಲ್ಲೆ ಗೆ ಬೇಟಿ ನೀಡುವುದಾಗಿ ಕೂಡಾ ಹೇಳಿದ್ದಾರೆ.
ನಿಯೋಗದಲ್ಲಿ ಒಕ್ಕೂಟ ಸದಸ್ಯರಾದ ಅಬ್ದುಲ್ ಜಲೀಲ್ ಕೃಷ್ಣಾಪುರ (ಅದ್ದಾಕ), ಸಿ. ಎಮ್.ಮುಸ್ತಫಾ, ಮೊಯಿದಿನ್ ಮೋನು, ಅಶ್ರಫ್ ಬದ್ರಿಯಾ, ಮೊಹಮ್ಮದ್ ಸ್ವಾಲಿಹ್ ಬಜ್ಪೆ, ಷರೀಫ್ ದೇರಳಕಟ್ಟೆ, ಇಬ್ರಾಹಿಂ ಕೈಲಾರ್ ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ