ಬೆಳಗಾವಿ, ಡಿ.20: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರಾಜಕತೆ ತಾರಕಕ್ಕೇರಿದ್ದು, ಈ ಬಗ್ಗೆ ಸದನದಲ್ಲಿ ಧ್ವನಿ ಎತ್ತುವಂತೆ ಕೋರಿ ಕೆ.ಅಶ್ರಫ್ ನೇತೃತ್ವದ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ನಿಯೋಗ ಇಂದು ಬೆಳಗಾವಿಯಲ್ಲಿ ವಿರೋಧ ಪಕ್ಷ ನಾಯಕರಾದ, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಸಿದ್ಧರಾಮಯ್ಯ ರವರನ್ನು ಭೇಟಿ ಮಾಡಿತು.
ದ.ಕ.ಜಿಲ್ಲೆಯಲ್ಲಿ ಇತ್ತೀಚೆಗಿನ ವರ್ಷಗಳಲ್ಲಿ ನಿರಂತರವಾಗಿ ನಡೆಯುತ್ತಿರುವ,ಶಾಂತಿ ಭಂಗ ಪ್ರಯತ್ನ, ಅಹಿತಕರ ಘಟನೆಗಳು, ಮತೀಯ ಉದ್ವಿಗ್ನತೆ, ನೈತಿಕ ಪೊಲೀಸು ಗಿರಿ, ಚೂರಿ ಇರಿತ, ಗುಂಪು ಹಲ್ಲೆ, ಪೊಲೀಸು ದೌರ್ಜನ್ಯ, ಉಪ್ಪಿನಂಗಡಿ ಪೊಲೀಸರಿಂದ ಶಾಂತಿಯುತ ಪ್ರತಿಭಟನಾಕಾರರ ಮೇಲೆ ಅಸಾಂವಿಧಾನಿಕ ಲಾಠಿ ದೌರ್ಜನ್ಯ , ಧಾರ್ಮಿಕ ಕೇಂದ್ರಗಳ ಮೇಲೆ ಧಾಳಿ ಇತ್ಯಾದಿ ವಿಷಯಗಳ ಮೇಲೆ ಸದನದಲ್ಲಿ ದ್ವನಿ ಎತ್ತಲು ಮತ್ತು ಜಿಲ್ಲೆಯ ಸಮಸ್ಯೆಗಳನ್ನು ಸರಕಾರದ ಮುಂದೆ ಪ್ರತಿನಿಧಿಸುವ ಕುರಿತು ಮುಸ್ಲಿಂ ಒಕ್ಕೂಟ ನಿಯೋಗವು ಸಿದ್ದರಾಮಯ್ಯರೊಂದಿಗೆ ಚರ್ಚಿಸಿತು.
ಭೇಟಿ ಮಾಡಿದ ನಿಯೋಗಕ್ಕೆ, ಈ ಬಗ್ಗೆ ಸ್ಪಂದಿಸುವುದಾಗಿ ಮತ್ತು ಸದನದಲ್ಲಿ ಧ್ವನಿ ಎತ್ತುವ ಭರವಸೆ ನೀಡಿದರು ಮತ್ತು ಮುಂದೆ ದ.ಕ.ಜಿಲ್ಲೆ ಗೆ ಬೇಟಿ ನೀಡುವುದಾಗಿ ಕೂಡಾ ಹೇಳಿದ್ದಾರೆ.
ನಿಯೋಗದಲ್ಲಿ ಒಕ್ಕೂಟ ಸದಸ್ಯರಾದ ಅಬ್ದುಲ್ ಜಲೀಲ್ ಕೃಷ್ಣಾಪುರ (ಅದ್ದಾಕ), ಸಿ. ಎಮ್.ಮುಸ್ತಫಾ, ಮೊಯಿದಿನ್ ಮೋನು, ಅಶ್ರಫ್ ಬದ್ರಿಯಾ, ಮೊಹಮ್ಮದ್ ಸ್ವಾಲಿಹ್ ಬಜ್ಪೆ, ಷರೀಫ್ ದೇರಳಕಟ್ಟೆ, ಇಬ್ರಾಹಿಂ ಕೈಲಾರ್ ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ