ಬೆಂಗಳೂರು,ಡಿ.23: ಕೆಲ ದಿನಗಳ ಹಿಂದೆ ಇಲ್ಲಿನ ಕೆಲವು ಮಸಿದಿಗಳಿಂದ ಪೋಲೀಸರು ಧ್ವನಿ ವರ್ಧಕಗಳನ್ನು ತೆರವುಗೊಳಿಸಿದ್ದರು. ಈ ಬಗ್ಗೆ ಹಲವಾರು ದೂರು ಲಭಿಸಿದ ಹಿನ್ನೆಲೆಯಲ್ಲಿ ರಾಜ್ಯ ವಖ್ಫ್ ಬೋರ್ಡ್ ಕೂಡಲೇ ಸ್ಪಂದಿಸಿದೆ.
ಮುಂಚಿತವಾಗಿ ಯಾವುದೇ ಮಾಹಿತಿ, ನೋಟೀಸ್ ನೀಡದೆ ಪೋಲಿಸ್ನವರು ಮಸೀದಿಗಳಿಗೆ ಅಕ್ರಮ ಪ್ರವೇಶಿಸಿ ಧ್ವನಿವರ್ಧಕ ತೆಗೆದ ವಿಷಯ ಸಂಭಂದಿಸಿ, “ಇನ್ನು ಯಾವುದೇ ಮಸೀದಿಯ ಧ್ವನಿವರ್ಧಕ ತೆಗೆಯಬಾರದು. ತೆಗೆಯಲಾದ ಧ್ವನಿ ವರ್ಧಕಗಳನ್ನು ತಕ್ಷಣ ಪುನರ್ ಸ್ಥಾಪಿಸಬೇಕು” ಎಂದು ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿಯವರ ನೇತ್ರತ್ವದ ವಕ್ಫ್ ಮಂಡಳಿ ಪತ್ರ ಮೂಲಕ ಖಡಕ್ ಆದೇಶ ನೀಡಿದೆ.
ಇದರನ್ವಯ ವಶ ಪಡಿಸಲಾದ ಮಸೀದಿಯ ಮೈಕ್ಗಳನ್ನು ಪುನ ಸ್ಥಾಪಿಸಲು ಪೋಲಿಸರು ಒಪ್ಪಿದ್ದಾರೆ. ಸಿದ್ದಾಪುರದ ಎಲ್ಲಾ ಮಸೀದಿಗಳ ಸಮಿತಿ ಮತ್ತು ಜಯನಗರ ಮುಸ್ಲಿಮ್ ಸಂಘಟನೆಗಳ ಸಮಿತಿ ಈ ಕುರಿತು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ತಮ್ಮ ಕಾಳಜಿಯನ್ನು ವ್ಯಕ್ತಪಡಿಸಿತ್ತು.ಪೊಲೀಸರಿಗೆ ತಮ್ಮ ತಪ್ಪಿನ ಅರಿವಾಗಿದ್ದು, ಮೈಕ್ ಗಳನ್ನು ವಾಪಾಸ್ ಕೊಡುವುದಾಗಿ ಹೇಳಿದ್ದಾರೆ.
ವದಂತಿಗಳಿಗೆ ಕಿವಿಗೊಡದೆ ಜನರು ಶಾಂತಿ ಕಾಪಾಡಬೇಕೆಂದು ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿ ಉಸ್ತಾದ್ ಜನರಿಗೆ ಮನವಿ ಮಾಡಿದ್ದಾರೆ.

















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)