ಬೆಂಗಳೂರು,ಡಿ.23: ಕೆಲ ದಿನಗಳ ಹಿಂದೆ ಇಲ್ಲಿನ ಕೆಲವು ಮಸಿದಿಗಳಿಂದ ಪೋಲೀಸರು ಧ್ವನಿ ವರ್ಧಕಗಳನ್ನು ತೆರವುಗೊಳಿಸಿದ್ದರು. ಈ ಬಗ್ಗೆ ಹಲವಾರು ದೂರು ಲಭಿಸಿದ ಹಿನ್ನೆಲೆಯಲ್ಲಿ ರಾಜ್ಯ ವಖ್ಫ್ ಬೋರ್ಡ್ ಕೂಡಲೇ ಸ್ಪಂದಿಸಿದೆ.
ಮುಂಚಿತವಾಗಿ ಯಾವುದೇ ಮಾಹಿತಿ, ನೋಟೀಸ್ ನೀಡದೆ ಪೋಲಿಸ್ನವರು ಮಸೀದಿಗಳಿಗೆ ಅಕ್ರಮ ಪ್ರವೇಶಿಸಿ ಧ್ವನಿವರ್ಧಕ ತೆಗೆದ ವಿಷಯ ಸಂಭಂದಿಸಿ, “ಇನ್ನು ಯಾವುದೇ ಮಸೀದಿಯ ಧ್ವನಿವರ್ಧಕ ತೆಗೆಯಬಾರದು. ತೆಗೆಯಲಾದ ಧ್ವನಿ ವರ್ಧಕಗಳನ್ನು ತಕ್ಷಣ ಪುನರ್ ಸ್ಥಾಪಿಸಬೇಕು” ಎಂದು ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿಯವರ ನೇತ್ರತ್ವದ ವಕ್ಫ್ ಮಂಡಳಿ ಪತ್ರ ಮೂಲಕ ಖಡಕ್ ಆದೇಶ ನೀಡಿದೆ.
ಇದರನ್ವಯ ವಶ ಪಡಿಸಲಾದ ಮಸೀದಿಯ ಮೈಕ್ಗಳನ್ನು ಪುನ ಸ್ಥಾಪಿಸಲು ಪೋಲಿಸರು ಒಪ್ಪಿದ್ದಾರೆ. ಸಿದ್ದಾಪುರದ ಎಲ್ಲಾ ಮಸೀದಿಗಳ ಸಮಿತಿ ಮತ್ತು ಜಯನಗರ ಮುಸ್ಲಿಮ್ ಸಂಘಟನೆಗಳ ಸಮಿತಿ ಈ ಕುರಿತು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ತಮ್ಮ ಕಾಳಜಿಯನ್ನು ವ್ಯಕ್ತಪಡಿಸಿತ್ತು.ಪೊಲೀಸರಿಗೆ ತಮ್ಮ ತಪ್ಪಿನ ಅರಿವಾಗಿದ್ದು, ಮೈಕ್ ಗಳನ್ನು ವಾಪಾಸ್ ಕೊಡುವುದಾಗಿ ಹೇಳಿದ್ದಾರೆ.
ವದಂತಿಗಳಿಗೆ ಕಿವಿಗೊಡದೆ ಜನರು ಶಾಂತಿ ಕಾಪಾಡಬೇಕೆಂದು ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿ ಉಸ್ತಾದ್ ಜನರಿಗೆ ಮನವಿ ಮಾಡಿದ್ದಾರೆ.

















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ