ಕುವೈತ್ ಸಿಟಿ: ಭಾರತದಿಂದ ಕುವೈತ್ ಗೆ ಆಗಮಿಸುವವರು ಔಷಧಿಗಳನ್ನು ತರಬೇಡಿ ಎಂದು ಕುವೈತ್ ನಲ್ಲಿರುವ ಭಾರತೀಯ ರಾಯಭಾರಿ ಸಿಬಿ ಜಾರ್ಜ್ ಭಾರತೀಯರಿಗೆ ಸಲಹೆ ನೀಡಿದ್ದಾರೆ.
ಇತ್ತೀಚೆಗೆ ವಿವಿಧ ರೀತಿಯ ಔಷಧಿಗಳನ್ನು ಹೊಂದಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯರು ಭಾರತದಿಂದ ಬರುವಾಗ ಕುವೈತ್ ಗೆ ಔಷಧಿಗಳನ್ನು ಕೊಂಡೊಯ್ಯಬಾರದು ಎಂದು ಅವರು ಹೇಳಿದರು.
ಮಾದಕ ದ್ರವ್ಯಗಳು ಎಂಬ ಶಂಕೆಯಲ್ಲಿ ಪ್ರಯಾಣಿಕರನ್ನು ಕನಿಷ್ಠ ದಿನಗಳ ಕಾಲ ಬಂಧನದಲ್ಲಿರಿಸಿದ ಅವಸ್ಥೆ ಉಂಟಾಗಿದೆ ಎಂದು ಅವರು ಹೇಳಿದರು. ಈ ಕಾರಣದಿಂದಾಗಿ, ಕುವೈತ್ಗೆ ಆಗಮಿಸುವ ಹೆಚ್ಚಿನ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ತಡೆದು ನಿಲ್ಲಿಸಲಾಗುತ್ತಿದೆ ಎಂದರು.
ಭಾರತದಲ್ಲಿ ನೀಡಲಾಗುವ ಎಲ್ಲಾ ಔಷಧಿಗಳು ಕುವೈತ್ ನಲ್ಲಿ ಲಭ್ಯವಿದ್ದು, ಭಾರತದಿಂದ ಔಷಧಿಗಳನ್ನು ತಂದು ವಿಮಾನ ನಿಲ್ದಾಣದಲ್ಲಿ ತೊಂದರೆ ಅನುಭವಿಸುವ ಅಗತ್ಯವಿಲ್ಲ ಎಂದು ಅವರು ಸೂಚಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು