ದುಬೈ: ಡಿಸೇಂಬರ್ 24 ಶುಕ್ರವಾರ 2021 ಅನಿವಾಸಿ ಭಾರತೀಯರ ಆಶಾಕಿರಣವಾದ ಅನಿವಾಸಿ ಕನ್ನಡಿಗರ ಒಕ್ಕೂಟ ಯುಎಇ ಆಶ್ರಯದಲ್ಲಿ ಬೃಹತ್ ಯಶಸ್ವಿ ರಕ್ತದಾನ ಶಿಬಿರವು ಲತೀಫಾ ಆಸ್ಪತ್ರೆ ರಕ್ತನಿಧಿ ದುಬೈಯಲ್ಲಿ ನಡೆಯಿತು. ರಕ್ತದಾನ ಶಿಬಿರದಲ್ಲಿ ಒಟ್ಟು 113 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ರಕ್ತದಾನ ಮಾಡಿದ ದಾನಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಅನಿವಾಸಿ ಕನ್ನಡಿಗರ ಒಕ್ಕೂಟ ಇದರ ಅಧ್ಯಕ್ಷರಾದ ಶಂಸುದ್ದೀನ್ ಉಡುಪಿ , (AKO) ಸಮಿತಿ ಸದಸ್ಯರಾದ ವಾಸಿಂ ಹೊನ್ನಾಳ, ಶಾಫಿ ಬಜ್ಪೆ , ಅಲಿ ನೀರ್ಮಾರ್ಗ , ಬದ್ರು ಸುಳ್ಯ , ಉಪಸ್ಥಿತರಿದ್ದರು. ರಕ್ತದಾನ ಶಿಬಿರದ ಉಸ್ತುವಾರಿಗಳಾಗಿ ಕೆ.ಕೆ.ಜಬ್ಬಾರ್ ಕಲ್ಲಡ್ಕ , ರಿಯಾಝ್ ಜೋಕಟ್ಟೆ ವಹಿಸಿದರು.

ಅದೇ ರೀತಿ (AKO) ಇದರ ಸ್ವಯಂ ಸೇವಕರು ಶಿಸ್ತುಬದ್ಧವಾಗಿ ಎಲ್ಲರನ್ನೂ ಗೌರವಿಸಿ ಕಾರ್ಯಕ್ರಮದ ಯಶಸ್ವಿಗೆ ಪಾತ್ರರಾದರು. ಕಾರ್ಯಕ್ರಮಕ್ಕೆ ಆಗಮಿಸಿದ ಅಥಿತಿಗಳಿಗೆ , ರಕ್ತದಾನಿಗಳಿಗೆ , ಆಸ್ಪತ್ರೆ ಸಿಬ್ಬಂದಿವರ್ಗದವರಿಗೆ ನಿಸಾರ್ ಆಲಡ್ಕರವರು ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ