ನವದೆಹಲಿ: ಹರಿದ್ವಾರ ಮತ್ತು ದೆಹಲಿಯಲ್ಲಿ ನವೆಂಬರ್ 17 ಮತ್ತು 19 ರಂದು ನಡೆದ ‘ಧರ್ಮ ಸಂಸದ್’ ಕಾರ್ಯಕ್ರಮದಲ್ಲಿ ಮಾಡಿದ ಉದ್ರೇಕಕಾರಿ ದ್ವೇಷ ಭಾಷಣಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಸುಪ್ರೀಂಕೋರ್ಟ್ನ 76 ಹಿರಿಯ ವಕೀಲರು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರಿಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸುಪ್ರೀಂಕೋರ್ಟ್ನ 76 ವಕೀಲರು ಸಿಜೆಐ ಎನ್.ವಿ.ರಮಣ ಅವರಿಗೆ ಪತ್ರ ಬರೆದು, ದೆಹಲಿ ಮತ್ತು ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಎರಡು ಧಾರ್ಮಿಕ ಕಾರ್ಯಕ್ರಮಗಳಲ್ಲಿ ‘ಜನಾಂಗೀಯ ಹತ್ಯಾಕಾಂಡ’ದ ಕರೆ ನೀಡಿದ್ದು, ಈ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದಾರೆ.
ಸನಾತನ ಧರ್ಮದ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಹರಿದ್ವಾರದ ವೇದ ನಿಕೇತನ ಧಾಮದಲ್ಲಿ ಜುನಾ ಅಖಾಡದ ಮಹಾಮಂಡಲೇಶ್ವರ ಸ್ವಾಮಿ ಯತಿ ನರಸಿಂಹಾನಂದ ಗಿರಿ ಅವರ ನೇತೃತ್ವದಲ್ಲಿ ಮೂರು ದಿನಗಳ ‘ಧರ್ಮ ಸಂಸದ್’ ಕಾರ್ಯಕ್ರಮ ಆಯೋಜಿಸಲಾಗಿತ್ತು. ದೆಹಲಿಯಲ್ಲಿ ಸಹ ಹಿಂದೂ ಯುವ ವಾಹಿನಿ ಇದೇ ರೀತಿಯ ಕಾರ್ಯಕ್ರಮ ಆಯೋಜಿಸಿತ್ತು. ಈ ವೇಳೆ ದ್ವೇಷದ ಭಾಷಣ ಮಾಡಿದ್ದಲ್ಲದೇ, ಸಮುದಾಯವೊಂದರ ಹತ್ಯೆಗೆ ಮುಕ್ತ ಕರೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಎರಡೂ ಕಾರ್ಯಕ್ರಮಗಳಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಲಾಗಿದೆ. ದೇಶದಲ್ಲಿ ಶಾಂತಿ ಕದಡುವ ಕೆಲಸ ಮಾಡಲಾಗುತ್ತಿದೆ. ಇದು ದೇಶದ ಏಕತೆ ಮತ್ತು ಸಮಗ್ರತೆಗೆ ಗಂಭೀರ ಬೆದರಿಕೆ ಉಂಟುಮಾಡುತ್ತದೆ ಎಂದು ಸುಪ್ರೀಂಕೋರ್ಟ್ ವಕೀಲರು ಕಳವಳ ವ್ಯಕ್ತಪಡಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಭಾರತೀಯ ದಂಡ ಸಂಹಿತೆ 1860ರ ಸೆಕ್ಷನ್ 120ಬಿ, 121ಎ, 153ಎ, 153ಬಿ, 295ಎ ಮತ್ತು 298ರ ಅಡಿಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಜೆಐಗೆ ನಿರ್ದೇಶನ ನೀಡಬೇಕು ಅನ್ನೋದು ವಕೀಲರ ಆಗ್ರಹವಾಗಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ