ಕೋಝಿಕ್ಕೋಡ್,ಡಿ.28| ಸಮಸ್ತ ಅಧ್ಯಕ್ಷ ಜಿಫ್ರಿ ಮುತ್ತುಕೋಯ ತಂಙಳರಿಗೆ ಅವರ ಜೀವ ಬೆದರಿಕೆ ಸಂಬಂಧಿತ ಹೇಳಿಕೆಗೆ ಸಚಿವ ವಿ ಅಬ್ದುರಹ್ಮಾನ್ ಪ್ರತಿಕ್ರಿಯಿಸಿದ್ದಾರೆ. ಅಗತ್ಯಬಿದ್ದರೆ ಪೊಲೀಸ್ ರಕ್ಷಣೆ ನೀಡುವುದಾಗಿ ಹಾಗೂ ಸರ್ಕಾರದ ಎಲ್ಲ ಬೆಂಬಲವೂ ತಮಗಿದೆ ಎಂದು ಸಚಿವರು ಹೇಳಿದರು. ತಂಙಳರಿಗೆ ದೂರವಾಣಿ ಕರೆ ಮಾಡಿ ಸಚಿವರು ಸರ್ಕಾರಿ ಭದ್ರತೆಯ ಭರವಸೆ ನೀಡಿದರು.
ಆದರೆ, ಈಗ ಭದ್ರತೆ ಬೇಕಿಲ್ಲ ಎಂದು ತಂಙಳ್ ಸಚಿವರಿಗೆ ತಿಳಿಸಿದರು. ಕೆಲ ದಿನಗಳ ಹಿಂದೆ ಬೆದರಿಕೆ ಹಾಕಲಾಗಿದ್ದು, ಅದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಜಿಫ್ರಿ ಮುತ್ತುಕೋಯ ತಂಙಳ್ ಅವರು ಸಚಿವರಿಗೆ ತಿಳಿಸಿದರು.
ಮಲಪ್ಪುರಂನ ಆನಕ್ಕಯಂ ಎಂಬಲ್ಲಿ ಸಮಸ್ತದ ಅಧೀನದ ಕಾಲೇಜಿನಲ್ಲಿ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ತಂಙಳ್ ರು ತಮಗೆ ಬೆದರಿಕೆಯ ಕರೆ ಬಂದ ಬಗ್ಗೆ ಬಹಿರಂಗಪಡಿಸಿದ್ದರು. ಚೆಂಬರಿಕ ಖಾಝಿಯವರ ಅನುಭವ ಉಂಟಾಗಲಿದೆ ಎಂದು ಅನಾಮಿಕ ಕರೆ ಬಂದಿತ್ತು ಎಂದ ತಂಙಳ್, ನಾನು ಯಾವುದೇ ಬೆದರಿಕೆಗೆ,ದಿಟ್ಟ ನಿಲುವಿನಿಂದ ಹಿಂದೆ ಸರಿಯುವವನಲ್ಲ ಎಂದು ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ