ಬೆಳಗಾವಿ, ಡಿ. 29:ಕರ್ನಾಟಕದಲ್ಲಿ ಡಿ.31 ರಂದು ಬಂದ್ ಗೆ ಕರೆ ನೀಡಲಾಗಿದೆ. ಬಂದ್ ನಡೆದೇ ನಡೆಯುತ್ತದೆ. ಸಾರ್ವಜನಿಕರು ಸಹಕಾರ ನೀಡಬೇಕೆಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.
ಬುಧವಾರ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು, ಸರಕಾರ ಸಚಿವ ಸಂಪುಟ ಸಭೆಯಲ್ಲಿ ಎಂಇಎಸ್(ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧ ಮಾಡುವ ಸ್ಪಷ್ಟ ನಿರ್ಣಯ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಡಿಸೆಂಬರ್ 31 ರಂದು ಸೂರ್ಯ-ಚಂದ್ರರ ಜಾಗ ಬದಲಾದರೂ ಬಂದ್ ನಿಲ್ಲುವುದಿಲ್ಲ. ರಾಜ್ಯ ಸರಕಾರ ಎಂಇಎಸ್ ನಿಷೇಧ ಮಾಡಲು ಸಚಿವ ಸಂಪುಟದಲ್ಲಿ ನಿರ್ಧಾರ ಮಾಡಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಿತ್ತು. ಆದರೆ ಈ ತೀರ್ಮಾನ ಮಾಡದ ಹಿನ್ನೆಲೆಯಲ್ಲಿ ಬಂದ್ ಕರೆ ನೀಡಲಾಗಿದೆ ಎಂದರು.
ಬೆಳಗಾವಿಯಲ್ಲಿ ಎಂಇಎಸ್ ಇರಲೇಬಾರದು. ರಾಜ್ಯೋತ್ಸವ ದಿನ ಕರಾಳ ದಿನ, ಅಧಿವೇಶನ ಸಂದರ್ಭದಲ್ಲಿ ಮಹಾಮೇಳ ನಡೆಸುತ್ತದೆ. ರಾಯಣ್ಣನ ಮೂರ್ತಿಗೆ ಅಪಮಾನ, ಕನ್ನಡ ಧ್ವಜ ಸುಡುವ ಪುಂಡ ಸಂಘಟನೆಯ ಅಸ್ತಿತ್ವ ಬೆಳಗಾವಿಯಲ್ಲಿ ಇರಬಾರದು ಎಂದರು.
ಕರ್ನಾಟಕ ಬಂದ್ ಕರೆಕೊಟ್ಟ ಉದ್ದೇಶ ಮುಖ್ಯವಾಗುತ್ತದೆ. ಡಿಸೆಂಬರ್31 ರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆ ವರೆಗೂ ಬಂದ್ ನಡೆಯಲಿದೆ ಎಂದರು. ಅಶೋಕ ಚಂದರಗಿ ಬಣದ ವಿರೋಧ ವಿಚಾರಕ್ಕೆ ಉತ್ತರಿಸಿದ ಅವರು, ಅಶೋಕ ಚಂದರಗಿ ಅವರನ್ನು ನಾನು ಎಂದಿಗೂ ಪರಿಗಣಿಸಿಯೇ ಇಲ್ಲ ಎಂದರು.
ಕನ್ನಡಪರ ಸಂಘಟನೆಗಳ ಹೋರಾಟಗಾರರಾದ ರಾಜು ಕೋಲಾ, ವಾಜೀದ ಹಿರೇಕುಡಿ, ಈರಣ್ಣಾ ಜೊಣ್ಣದ ಸೇರಿದಂತೆ ಇನ್ನಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ