ಜಿದ್ದಾ : ಪವಿತ್ರ ಮಕ್ಕಾ ಮತ್ತು ಮದೀನಾ ಹರಮ್ ಮಸೀದಿಗಳಲ್ಲಿ ಕೋವಿಡ್ ಪ್ರೋಟೋಕಾಲ್ಗಳಲ್ಲಿ ನೀಡಲಾಗಿದ್ದ ಕೆಲವು ವಿನಾಯಿತಿಯನ್ನು ಹಿಂಪಡೆಯಲಾಗಿದೆ. ಪ್ರಾರ್ಥನೆಗೆ ಆಗಮಿಸುವವರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಹರಮ್ ಕಾರ್ಯಾಲಯ ಸಲಹೆ ನೀಡಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಪುನಃಸ್ಥಾಪಿಸಲಾಗಿದೆ. ಬಹುಪಾಲು ಜನರು ಲಸಿಕೆಯನ್ನು ಸ್ವೀಕರಿಸಿದ್ದಾರೆ ಮತ್ತು ಕೋವಿಡ್ ಪ್ರಕರಣಗಳು ತೀವ್ರವಾಗಿ ಇಳಿಮುಖವಾಗುತ್ತಿದ್ದ ಸಂದರ್ಭದಲ್ಲಿ ಮಕ್ಕಾ ಮತ್ತು ಮದೀನಾದ ಹರಂಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಲಾಗಿತ್ತು.
ಇದೀಗ ದೇಶದಲ್ಲಿ ಮತ್ತೆ ರೂಪಾಂತರಿ ಕೋವಿಡ್ ಹೊಸ ಅಲೆಯ ಹಿನ್ನೆಲೆಯಲ್ಲಿ, ನಿರ್ಬಂಧಗಳನ್ನು ಪುನಃಸ್ಥಾಪಿಸಲು ಪ್ರಾರಂಭಿಸಿದೆ. ಗುರುವಾರ ಬೆಳಗ್ಗೆ 7 ಗಂಟೆಯಿಂದ ಉಮ್ರಾ ಯಾತ್ರಿಕರು ಮತ್ತು ಪ್ರಾರ್ಥನೆಗೆ ಆಗಮಿಸುವವರು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು.
ಪ್ರಾರ್ಥನೆ, ತವಾಫ್ ಮತ್ತು ಸಅ್ ಯ್ ಮೇಲಿನ ನಿರ್ಬಂಧಗಳನ್ನು ನಾಳೆಯಿಂದ ಪುನಃಸ್ಥಾಪಿಸಲಾಗುತ್ತದೆ. ಹರಂ ತಲುಪುವವರು ಪರವಾನಗಿಯಲ್ಲಿ ತಿಳಿಸಲಾದ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು.
ಹರಂಗಳಲ್ಲಿನ ನಿರ್ಬಂಧಗಳು ಉದ್ಯೋಗಿಗಳಿಗೂ ಅನ್ವಯಿಸುತ್ತವೆ. ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯವು ದೇಶಾದ್ಯಂತ ಎಲ್ಲಾ ಮಸೀದಿಗಳು ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಲು ಶಿಫಾರಸು ಮಾಡಿದೆ. ಮಸೀದಿಗಳಿಗೆ ಹಾಜರಾಗುವವರು ಕೋವಿಡ್ ತಡೆಗಟ್ಟುವ ಕ್ರಮಗಳನ್ನು ಅನುಸರಿಸುತ್ತಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಮಸೀದಿಯ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ