ಜಿದ್ದಾ : ಪವಿತ್ರ ಮಕ್ಕಾ ಮತ್ತು ಮದೀನಾ ಹರಮ್ ಮಸೀದಿಗಳಲ್ಲಿ ಕೋವಿಡ್ ಪ್ರೋಟೋಕಾಲ್ಗಳಲ್ಲಿ ನೀಡಲಾಗಿದ್ದ ಕೆಲವು ವಿನಾಯಿತಿಯನ್ನು ಹಿಂಪಡೆಯಲಾಗಿದೆ. ಪ್ರಾರ್ಥನೆಗೆ ಆಗಮಿಸುವವರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಹರಮ್ ಕಾರ್ಯಾಲಯ ಸಲಹೆ ನೀಡಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಪುನಃಸ್ಥಾಪಿಸಲಾಗಿದೆ. ಬಹುಪಾಲು ಜನರು ಲಸಿಕೆಯನ್ನು ಸ್ವೀಕರಿಸಿದ್ದಾರೆ ಮತ್ತು ಕೋವಿಡ್ ಪ್ರಕರಣಗಳು ತೀವ್ರವಾಗಿ ಇಳಿಮುಖವಾಗುತ್ತಿದ್ದ ಸಂದರ್ಭದಲ್ಲಿ ಮಕ್ಕಾ ಮತ್ತು ಮದೀನಾದ ಹರಂಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಲಾಗಿತ್ತು.
ಇದೀಗ ದೇಶದಲ್ಲಿ ಮತ್ತೆ ರೂಪಾಂತರಿ ಕೋವಿಡ್ ಹೊಸ ಅಲೆಯ ಹಿನ್ನೆಲೆಯಲ್ಲಿ, ನಿರ್ಬಂಧಗಳನ್ನು ಪುನಃಸ್ಥಾಪಿಸಲು ಪ್ರಾರಂಭಿಸಿದೆ. ಗುರುವಾರ ಬೆಳಗ್ಗೆ 7 ಗಂಟೆಯಿಂದ ಉಮ್ರಾ ಯಾತ್ರಿಕರು ಮತ್ತು ಪ್ರಾರ್ಥನೆಗೆ ಆಗಮಿಸುವವರು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು.
ಪ್ರಾರ್ಥನೆ, ತವಾಫ್ ಮತ್ತು ಸಅ್ ಯ್ ಮೇಲಿನ ನಿರ್ಬಂಧಗಳನ್ನು ನಾಳೆಯಿಂದ ಪುನಃಸ್ಥಾಪಿಸಲಾಗುತ್ತದೆ. ಹರಂ ತಲುಪುವವರು ಪರವಾನಗಿಯಲ್ಲಿ ತಿಳಿಸಲಾದ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು.
ಹರಂಗಳಲ್ಲಿನ ನಿರ್ಬಂಧಗಳು ಉದ್ಯೋಗಿಗಳಿಗೂ ಅನ್ವಯಿಸುತ್ತವೆ. ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯವು ದೇಶಾದ್ಯಂತ ಎಲ್ಲಾ ಮಸೀದಿಗಳು ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಲು ಶಿಫಾರಸು ಮಾಡಿದೆ. ಮಸೀದಿಗಳಿಗೆ ಹಾಜರಾಗುವವರು ಕೋವಿಡ್ ತಡೆಗಟ್ಟುವ ಕ್ರಮಗಳನ್ನು ಅನುಸರಿಸುತ್ತಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಮಸೀದಿಯ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ