ಬೆಂಗಳೂರು: ಕನ್ನಡ ಬಾವುಟ ಸುಟ್ಟು, ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿದ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ನಾಳೆ ಡಿ.31ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಅನ್ನು ವಾಟಾಳ್ ನಾಗರಾಜ್ ಹಿಂಪಡೆದಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಮನವೊಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಾಟಾಳ್, ನಾಳೆ ನಡೆಯಬೇಕಾಗಿದ್ದ ಬಂದ್ ಇರಲ್ಲ. ಸಿಎಂ ಭರವಸೆ ಹಿನ್ನೆಲೆ ನಾಳೆಯ ಬಂದ್ ವಾಪಾಸ್ ಪಡೆದಿರೋದಾಗಿ ತಿಳಿಸಿದರು.
ನಾಳೆ ಬಂದ್ ಇಲ್ಲ, ಬೆಂಗಳೂರಿನಲ್ಲಿ ಪ್ರತಿಭಟನೆ ಇರುತ್ತೆ. ಜನವರಿ 22ರಂದು ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ. ಕನ್ನಡಪರ ಸಂಘಟನೆಯ ಒಕ್ಕೂಟದ ಸದಸ್ಯರು ಜ.22ರಂದು ಬಂದ್ ಮಾಡಲು ಒಮ್ಮತದ ನಿರ್ಧಾರ ಮಾಡಿದ್ದಾರೆ. ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್, ಕುಮಾರ್ ಒಕ್ಕೂಟದ ಸದಸ್ಯರು ಒಮ್ಮತದ ನಿರ್ಧಾರ ಮಾಡಿದ್ದಾರೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸದೇ ಹೋದಲ್ಲಿ ಜನವರಿ 22ರಂದು ಬಂದ್ ಮಾಡಲು ನಿರ್ಧರಿದ್ದೇವೆ ಎಂದು ವಾಟಾಳ್ ನಾಗರಾಜ್ ಹೇಳಿದರು.
ಸಿಎಂ ಮನವೊಲಿಕೆ ಸಕ್ಸಸ್
ಸಿಎಂ ಎರಡು ಬಾರಿ ಮನವಿ ಮಾಡಿದ್ರು, ಇಂದು ಸಿಎಂ ಗೃಹಕಚೇರಿ ಕೃಷ್ಣಾಗೆ ಕರೆಸಿ ಮಾತಾಡಿದ್ರು. ಎಂಇಎಸ್ ನಿಷೇಧಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ. ಬಂದ್ ಹಿಂದೆ ಪಡೆಯಿರಿ ಎಂದು ಸಿಎಂ ಮನವಿ ಮಾಡಿದರು. ಸಿಎಂ ಮನವಿಗೆ ಗೌರವ ಕೊಡಲು ನಿರ್ಧಾರ ಮಾಡಲಾಗಿದೆ. ಒಕ್ಕೂಟದ ಮುಖಂಡರು ಎಲ್ಲರೂ ನಾಳೆ ಬಂದ್ ಮಾಡಿದ್ರೆ ಹೊಸ ವರುಷಕ್ಕೆ ತೊಂದರೆ ಆಗುತ್ತೆ ಎಂದು ಬಂದ್ ಮುಂದೂಡಲು ಒತ್ತಡ ಹೇರಿದ್ದರು. ನನ್ನ ಜೀವನದಲ್ಲಿ ಈ ರೀತಿ ಒತ್ತಡ ಎಂದೂ ಬಂದಿದ್ದಿಲ್ಲ. ಹೀಗಾಗಿ ಬಂದ್ ವಾಪಸ್ ಪಡೆದಿರೋದಾಗಿ ವಾಟಾಳ್ ಸ್ಪಷ್ಟನೆ ನೀಡಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)