ಬೆಂಗಳೂರು: ಕನ್ನಡ ಬಾವುಟ ಸುಟ್ಟು, ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿದ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ನಾಳೆ ಡಿ.31ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಅನ್ನು ವಾಟಾಳ್ ನಾಗರಾಜ್ ಹಿಂಪಡೆದಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಮನವೊಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಾಟಾಳ್, ನಾಳೆ ನಡೆಯಬೇಕಾಗಿದ್ದ ಬಂದ್ ಇರಲ್ಲ. ಸಿಎಂ ಭರವಸೆ ಹಿನ್ನೆಲೆ ನಾಳೆಯ ಬಂದ್ ವಾಪಾಸ್ ಪಡೆದಿರೋದಾಗಿ ತಿಳಿಸಿದರು.
ನಾಳೆ ಬಂದ್ ಇಲ್ಲ, ಬೆಂಗಳೂರಿನಲ್ಲಿ ಪ್ರತಿಭಟನೆ ಇರುತ್ತೆ. ಜನವರಿ 22ರಂದು ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ. ಕನ್ನಡಪರ ಸಂಘಟನೆಯ ಒಕ್ಕೂಟದ ಸದಸ್ಯರು ಜ.22ರಂದು ಬಂದ್ ಮಾಡಲು ಒಮ್ಮತದ ನಿರ್ಧಾರ ಮಾಡಿದ್ದಾರೆ. ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್, ಕುಮಾರ್ ಒಕ್ಕೂಟದ ಸದಸ್ಯರು ಒಮ್ಮತದ ನಿರ್ಧಾರ ಮಾಡಿದ್ದಾರೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸದೇ ಹೋದಲ್ಲಿ ಜನವರಿ 22ರಂದು ಬಂದ್ ಮಾಡಲು ನಿರ್ಧರಿದ್ದೇವೆ ಎಂದು ವಾಟಾಳ್ ನಾಗರಾಜ್ ಹೇಳಿದರು.
ಸಿಎಂ ಮನವೊಲಿಕೆ ಸಕ್ಸಸ್
ಸಿಎಂ ಎರಡು ಬಾರಿ ಮನವಿ ಮಾಡಿದ್ರು, ಇಂದು ಸಿಎಂ ಗೃಹಕಚೇರಿ ಕೃಷ್ಣಾಗೆ ಕರೆಸಿ ಮಾತಾಡಿದ್ರು. ಎಂಇಎಸ್ ನಿಷೇಧಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ. ಬಂದ್ ಹಿಂದೆ ಪಡೆಯಿರಿ ಎಂದು ಸಿಎಂ ಮನವಿ ಮಾಡಿದರು. ಸಿಎಂ ಮನವಿಗೆ ಗೌರವ ಕೊಡಲು ನಿರ್ಧಾರ ಮಾಡಲಾಗಿದೆ. ಒಕ್ಕೂಟದ ಮುಖಂಡರು ಎಲ್ಲರೂ ನಾಳೆ ಬಂದ್ ಮಾಡಿದ್ರೆ ಹೊಸ ವರುಷಕ್ಕೆ ತೊಂದರೆ ಆಗುತ್ತೆ ಎಂದು ಬಂದ್ ಮುಂದೂಡಲು ಒತ್ತಡ ಹೇರಿದ್ದರು. ನನ್ನ ಜೀವನದಲ್ಲಿ ಈ ರೀತಿ ಒತ್ತಡ ಎಂದೂ ಬಂದಿದ್ದಿಲ್ಲ. ಹೀಗಾಗಿ ಬಂದ್ ವಾಪಸ್ ಪಡೆದಿರೋದಾಗಿ ವಾಟಾಳ್ ಸ್ಪಷ್ಟನೆ ನೀಡಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ