ರಿಯಾದ್: ವಲಸಿಗರ ಪ್ರಯಾಣ ಸಮಸ್ಯೆಯನ್ನು ಪರಿಹರಿಸಲು ಭಾರತ-ಸೌದಿ ಏರ್ ಬಬಲ್ ಒಪ್ಪಂದ ಇಂದಿನಿಂದ ಜಾರಿಗೆ ಬಂದಿದೆ. ರಾಜ್ಯದ ಬೆಂಗಳೂರು ಸೇರಿದಂತೆ ಕೇರಳದ, ಕೋಝಿಕ್ಕೋಡ್ ಮತ್ತು ಕೊಚ್ಚಿ ಸಹಿತ ಭಾರತದ ಎಂಟು ವಿಮಾನ ನಿಲ್ದಾಣಗಳಿಗೆ ಮತ್ತು ಸೌದಿ ಅರೇಬಿಯಾದ ನಾಲ್ಕು ವಿಮಾನ ನಿಲ್ದಾಣಗಳಿಗೆ ಶೀಘ್ರದಲ್ಲೇ ವಿಮಾನಗಳನ್ನು ಪ್ರಾರಂಭಿಸಲಾಗುವುದು ಎಂದು ಭಾರತೀಯ ರಾಯಭಾರಿ ಅವ್ಸಾಫ್ ಸಯೀದ್ ರಿಯಾದ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸೌದಿಯಿಂದ ಕೋಝಿಕ್ಕೋಡ್, ಕೊಚ್ಚಿ, ಚೆನ್ನೈ, ಬೆಂಗಳೂರು, ಹೈದರಾಬಾದ್, ಲಕ್ನೋ, ಮುಂಬೈ ಮತ್ತು ದೆಹಲಿ ವಿಮಾನ ನಿಲ್ದಾಣಗಳಿಗೆ ಈ ಸೇವೆ ಲಭ್ಯವಿದೆ.
ಭಾರತದಿಂದ ರಿಯಾದ್, ಜಿದ್ದಾ , ಮದೀನಾ ಮತ್ತು ದಮ್ಮಾಮ್ ವಿಮಾನ ನಿಲ್ದಾಣಗಳಿಗೆ ವಿಮಾನಯಾನ ಇರಲಿದೆ. ಸೇವೆಯನ್ನು ಯಾವಾಗಿನಿಂದ ಪ್ರಾರಂಭಿಸಲಿದ್ದಾರೆ ಎಂಬುದನ್ನು ಸೌದಿ ಮತ್ತು ಭಾರತೀಯ ನಾಗರಿಕ ವಿಮಾನಯಾನ ಅಧಿಕಾರಿಗಳು ಶೀಘ್ರದಲ್ಲೇ ನಿರ್ಧರಿಸಲಿದ್ದಾರೆ. ಸೌದಿ ಅರೇಬಿಯಾಕ್ಕೆ ಆಗಮಿಸುವ ಪ್ರಯಾಣಿಕರು ಹೋಟೆಲ್ ಕ್ವಾರಂಟೈನ್ ಸೇರಿದಂತೆ ಕೆಲವು ಷರತ್ತುಗಳನ್ನು ಅನುಸರಿಸಬೇಕು ಎಂದು ರಾಯಭಾರಿ ಹೇಳಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ