ರಿಯಾದ್: ವಲಸಿಗರ ಪ್ರಯಾಣ ಸಮಸ್ಯೆಯನ್ನು ಪರಿಹರಿಸಲು ಭಾರತ-ಸೌದಿ ಏರ್ ಬಬಲ್ ಒಪ್ಪಂದ ಇಂದಿನಿಂದ ಜಾರಿಗೆ ಬಂದಿದೆ. ರಾಜ್ಯದ ಬೆಂಗಳೂರು ಸೇರಿದಂತೆ ಕೇರಳದ, ಕೋಝಿಕ್ಕೋಡ್ ಮತ್ತು ಕೊಚ್ಚಿ ಸಹಿತ ಭಾರತದ ಎಂಟು ವಿಮಾನ ನಿಲ್ದಾಣಗಳಿಗೆ ಮತ್ತು ಸೌದಿ ಅರೇಬಿಯಾದ ನಾಲ್ಕು ವಿಮಾನ ನಿಲ್ದಾಣಗಳಿಗೆ ಶೀಘ್ರದಲ್ಲೇ ವಿಮಾನಗಳನ್ನು ಪ್ರಾರಂಭಿಸಲಾಗುವುದು ಎಂದು ಭಾರತೀಯ ರಾಯಭಾರಿ ಅವ್ಸಾಫ್ ಸಯೀದ್ ರಿಯಾದ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸೌದಿಯಿಂದ ಕೋಝಿಕ್ಕೋಡ್, ಕೊಚ್ಚಿ, ಚೆನ್ನೈ, ಬೆಂಗಳೂರು, ಹೈದರಾಬಾದ್, ಲಕ್ನೋ, ಮುಂಬೈ ಮತ್ತು ದೆಹಲಿ ವಿಮಾನ ನಿಲ್ದಾಣಗಳಿಗೆ ಈ ಸೇವೆ ಲಭ್ಯವಿದೆ.
ಭಾರತದಿಂದ ರಿಯಾದ್, ಜಿದ್ದಾ , ಮದೀನಾ ಮತ್ತು ದಮ್ಮಾಮ್ ವಿಮಾನ ನಿಲ್ದಾಣಗಳಿಗೆ ವಿಮಾನಯಾನ ಇರಲಿದೆ. ಸೇವೆಯನ್ನು ಯಾವಾಗಿನಿಂದ ಪ್ರಾರಂಭಿಸಲಿದ್ದಾರೆ ಎಂಬುದನ್ನು ಸೌದಿ ಮತ್ತು ಭಾರತೀಯ ನಾಗರಿಕ ವಿಮಾನಯಾನ ಅಧಿಕಾರಿಗಳು ಶೀಘ್ರದಲ್ಲೇ ನಿರ್ಧರಿಸಲಿದ್ದಾರೆ. ಸೌದಿ ಅರೇಬಿಯಾಕ್ಕೆ ಆಗಮಿಸುವ ಪ್ರಯಾಣಿಕರು ಹೋಟೆಲ್ ಕ್ವಾರಂಟೈನ್ ಸೇರಿದಂತೆ ಕೆಲವು ಷರತ್ತುಗಳನ್ನು ಅನುಸರಿಸಬೇಕು ಎಂದು ರಾಯಭಾರಿ ಹೇಳಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ