ಬೆಂಗಳೂರು: ಓಮಿಕ್ರಾನ್ ಸೋಂಕು ತೀವ್ರವಾಗಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮತ್ತಷ್ಟು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಜನವರಿ 7 ರಂದು ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಈ ಕುರಿತಾಗಿ ಕಂದಾಯ ಸಚಿವ ಆರ್. ಅಶೋಕ್ ಮಾತನಾಡಿ, ಮೂರನೇ ಅಲೆ ಬರೋದು ನಿಶ್ಚಿತ ಅನ್ನುವ ವಾತಾವರಣ ಇದೆ. ಬೆಂಗಳೂರು ರೆಡ್ ಝೋನ್ ಅಂತ ಕೇಂದ್ರ ಗುರುತಿಸಿದೆ. ಈ ನಿಟ್ಟಿನಲ್ಲಿ ಜನವರಿ 7 ಕ್ಕೂ ಮುನ್ನ ಒಂದು ಸಭೆ ಮಾಡ್ತೇವೆ. ಈ ಸಭೆಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುತ್ತದೆ. ತಜ್ಞರು ಮಾಡುವ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿ ಮಾಡ್ತೇವೆ ಎಂದು ತಿಳಿಸಿದರು.
ಈ ಬಾರಿ ಯಾವುದೇ ಅಚಾತುರ್ಯ ಆಗದಂತೆ ಎಲ್ಲ ರೀತಿಯ ತಯಾರಿ ನಡೆಸಲಾಗುವುದು. ಈ ನಿಟ್ಟಿನಲ್ಲಿ ಸಭೆ ಮಾಡಲಾಗುವುದು. ಸಾರ್ವಜನಿಕರು ಸರ್ಕಾರ ತರುವ ಕಠಿಣ ನಿರ್ಬಂಧಕ್ಕೆ ಸಹಕಾರ ಕೊಡಬೇಕು. ಇಲ್ಲದೇ ಇದ್ದಲ್ಲಿ, ನಾವು ಕೂಡಾ ಪಶ್ಚಿಮ ಬಂಗಾಳ, ಮುಂಬಯಿ ಮಾದರಿಯಲ್ಲಿ ಬೆಂಗಳೂರಿನಲ್ಲೂ ಲಾಕ್ಡೌನ್ ಮಾಡಬೇಕಾಗುತ್ತೆ ಎಂದರು.
ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಮೂರನೇ ಅಲೆ ಬರುವ ಸಾಧ್ಯತೆಯೂ ಹೆಚ್ಚಾಗಿದೆ. ಈಗಾಗಲೇ ರಾತ್ರಿ 10 ರಿಂದ ಬೆಳಗ್ಗೆ ಐದರ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಇದೀಗ ಮತ್ತಷ್ಟು ನಿರ್ಬಂಧಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧಾರ ಮಾಡಿದೆ. ಜನವರಿ 7 ರ ಒಳಗಾಗಿ ಸಿಎಂ ನೇತೃತ್ವದ ಸಭೆ ಈ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದೆ.
















ಇನ್ನಷ್ಟು ಸುದ್ದಿಗಳು
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ