ಬೆಂಗಳೂರು: ಓಮಿಕ್ರಾನ್ ಸೋಂಕು ತೀವ್ರವಾಗಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮತ್ತಷ್ಟು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಜನವರಿ 7 ರಂದು ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಈ ಕುರಿತಾಗಿ ಕಂದಾಯ ಸಚಿವ ಆರ್. ಅಶೋಕ್ ಮಾತನಾಡಿ, ಮೂರನೇ ಅಲೆ ಬರೋದು ನಿಶ್ಚಿತ ಅನ್ನುವ ವಾತಾವರಣ ಇದೆ. ಬೆಂಗಳೂರು ರೆಡ್ ಝೋನ್ ಅಂತ ಕೇಂದ್ರ ಗುರುತಿಸಿದೆ. ಈ ನಿಟ್ಟಿನಲ್ಲಿ ಜನವರಿ 7 ಕ್ಕೂ ಮುನ್ನ ಒಂದು ಸಭೆ ಮಾಡ್ತೇವೆ. ಈ ಸಭೆಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುತ್ತದೆ. ತಜ್ಞರು ಮಾಡುವ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿ ಮಾಡ್ತೇವೆ ಎಂದು ತಿಳಿಸಿದರು.
ಈ ಬಾರಿ ಯಾವುದೇ ಅಚಾತುರ್ಯ ಆಗದಂತೆ ಎಲ್ಲ ರೀತಿಯ ತಯಾರಿ ನಡೆಸಲಾಗುವುದು. ಈ ನಿಟ್ಟಿನಲ್ಲಿ ಸಭೆ ಮಾಡಲಾಗುವುದು. ಸಾರ್ವಜನಿಕರು ಸರ್ಕಾರ ತರುವ ಕಠಿಣ ನಿರ್ಬಂಧಕ್ಕೆ ಸಹಕಾರ ಕೊಡಬೇಕು. ಇಲ್ಲದೇ ಇದ್ದಲ್ಲಿ, ನಾವು ಕೂಡಾ ಪಶ್ಚಿಮ ಬಂಗಾಳ, ಮುಂಬಯಿ ಮಾದರಿಯಲ್ಲಿ ಬೆಂಗಳೂರಿನಲ್ಲೂ ಲಾಕ್ಡೌನ್ ಮಾಡಬೇಕಾಗುತ್ತೆ ಎಂದರು.
ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಮೂರನೇ ಅಲೆ ಬರುವ ಸಾಧ್ಯತೆಯೂ ಹೆಚ್ಚಾಗಿದೆ. ಈಗಾಗಲೇ ರಾತ್ರಿ 10 ರಿಂದ ಬೆಳಗ್ಗೆ ಐದರ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಇದೀಗ ಮತ್ತಷ್ಟು ನಿರ್ಬಂಧಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧಾರ ಮಾಡಿದೆ. ಜನವರಿ 7 ರ ಒಳಗಾಗಿ ಸಿಎಂ ನೇತೃತ್ವದ ಸಭೆ ಈ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ