ಮುಂಬೈ: ವಿವಾದಿತ ಬುಲ್ಲಿ ಬಾಯ್ ಅಪ್ಲಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬೆಂಗಳೂರು ಮೂಲದ ಯುವಕನನ್ನು ವಶಕ್ಕೆ ಪಡೆದು ಮುಂಬೈಗೆ ವಿಚಾರಣೆಗೆ ಕರೆದೊಯ್ದಿದ್ದಾರೆ.
ನೂರಾರು ಮುಸ್ಲಿಂ ಮಹಿಳೆಯರ ಫೊಟೋಗಳನ್ನು ಅನಧಿಕೃತವಾಗಿ ಸಂಗ್ರಹಿಸಿ ‘ಬುಲ್ಲಿ ಬಾಯ್’ ಅಪ್ಲಿಕೇಶನ್ ಮುಖಾಂತರ ಅವರನ್ನು ಹರಾಜಿಗಿಡಲಾಗುತ್ತಿತ್ತು.
ಮಹಿಳಾ ದ್ವೇಷಿ ಹಾಗೂ ಸ್ತ್ರೀ ವಿರೋಧಿ ಅಂಶಗಳಿರುವ ಒಕ್ಕಣೆಗಳೊಂದಿಗೆ ಮುಸ್ಲಿಂ ಮಹಿಳೆಯರ ಭಾವಚಿತ್ರಗಳನ್ನು ಹಂಚುತ್ತಿದ್ದ ‘ಬುಲ್ಲಿ ಬಾಯ್’ ಅಪ್ಲಿಕೇಶನ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕೂಡಾ ವಿಚಾರಣೆ ನಡೆಸುತ್ತಿದ್ದು, ಮುಂಬೈ ಪೊಲೀಸರು ಪ್ರತ್ಯೇಕವಾಗಿ ತನಿಖೆ ಕೈಗೆತ್ತಿಕೊಂಡಿದ್ದರು.
ಶಿವಸೇನೆ ಸಂಸದೆ ಪ್ರಿಯಾಂಕ ಚತುರ್ವೇದಿ, ಅಸಾದುದ್ದೀನ್ ಉವೈಸಿ ಸೇರಿದಂತೆ ಹಲವಾರು ಮಂದಿ ಕೃತ್ಯವನ್ನು ನಾಚಿಕೆಗೇಡಿನ ಸಂಗತಿಯೆಂದು ಖಂಡಿಸಿದ್ದರು.
ತೀವ್ರ ವಿವಾದದ ಬಳಿಕ ‘ಬುಲ್ಲಿ ಬಾಯ್’ ಅಪ್ಲಿಕೇಶನನ್ನು ಸರಕಾರ ನಿಷೇದಿಸಿದೆ.















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ