ಮುಂಬೈ: ವಿವಾದಿತ ಬುಲ್ಲಿ ಬಾಯ್ ಅಪ್ಲಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬೆಂಗಳೂರು ಮೂಲದ ಯುವಕನನ್ನು ವಶಕ್ಕೆ ಪಡೆದು ಮುಂಬೈಗೆ ವಿಚಾರಣೆಗೆ ಕರೆದೊಯ್ದಿದ್ದಾರೆ.
ನೂರಾರು ಮುಸ್ಲಿಂ ಮಹಿಳೆಯರ ಫೊಟೋಗಳನ್ನು ಅನಧಿಕೃತವಾಗಿ ಸಂಗ್ರಹಿಸಿ ‘ಬುಲ್ಲಿ ಬಾಯ್’ ಅಪ್ಲಿಕೇಶನ್ ಮುಖಾಂತರ ಅವರನ್ನು ಹರಾಜಿಗಿಡಲಾಗುತ್ತಿತ್ತು.
ಮಹಿಳಾ ದ್ವೇಷಿ ಹಾಗೂ ಸ್ತ್ರೀ ವಿರೋಧಿ ಅಂಶಗಳಿರುವ ಒಕ್ಕಣೆಗಳೊಂದಿಗೆ ಮುಸ್ಲಿಂ ಮಹಿಳೆಯರ ಭಾವಚಿತ್ರಗಳನ್ನು ಹಂಚುತ್ತಿದ್ದ ‘ಬುಲ್ಲಿ ಬಾಯ್’ ಅಪ್ಲಿಕೇಶನ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕೂಡಾ ವಿಚಾರಣೆ ನಡೆಸುತ್ತಿದ್ದು, ಮುಂಬೈ ಪೊಲೀಸರು ಪ್ರತ್ಯೇಕವಾಗಿ ತನಿಖೆ ಕೈಗೆತ್ತಿಕೊಂಡಿದ್ದರು.
ಶಿವಸೇನೆ ಸಂಸದೆ ಪ್ರಿಯಾಂಕ ಚತುರ್ವೇದಿ, ಅಸಾದುದ್ದೀನ್ ಉವೈಸಿ ಸೇರಿದಂತೆ ಹಲವಾರು ಮಂದಿ ಕೃತ್ಯವನ್ನು ನಾಚಿಕೆಗೇಡಿನ ಸಂಗತಿಯೆಂದು ಖಂಡಿಸಿದ್ದರು.
ತೀವ್ರ ವಿವಾದದ ಬಳಿಕ ‘ಬುಲ್ಲಿ ಬಾಯ್’ ಅಪ್ಲಿಕೇಶನನ್ನು ಸರಕಾರ ನಿಷೇದಿಸಿದೆ.















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ