ಮುಂಬೈ: ವಿವಾದಿತ ಬುಲ್ಲಿ ಬಾಯ್ ಅಪ್ಲಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬೆಂಗಳೂರು ಮೂಲದ ಯುವಕನನ್ನು ವಶಕ್ಕೆ ಪಡೆದು ಮುಂಬೈಗೆ ವಿಚಾರಣೆಗೆ ಕರೆದೊಯ್ದಿದ್ದಾರೆ.
ನೂರಾರು ಮುಸ್ಲಿಂ ಮಹಿಳೆಯರ ಫೊಟೋಗಳನ್ನು ಅನಧಿಕೃತವಾಗಿ ಸಂಗ್ರಹಿಸಿ ‘ಬುಲ್ಲಿ ಬಾಯ್’ ಅಪ್ಲಿಕೇಶನ್ ಮುಖಾಂತರ ಅವರನ್ನು ಹರಾಜಿಗಿಡಲಾಗುತ್ತಿತ್ತು.
ಮಹಿಳಾ ದ್ವೇಷಿ ಹಾಗೂ ಸ್ತ್ರೀ ವಿರೋಧಿ ಅಂಶಗಳಿರುವ ಒಕ್ಕಣೆಗಳೊಂದಿಗೆ ಮುಸ್ಲಿಂ ಮಹಿಳೆಯರ ಭಾವಚಿತ್ರಗಳನ್ನು ಹಂಚುತ್ತಿದ್ದ ‘ಬುಲ್ಲಿ ಬಾಯ್’ ಅಪ್ಲಿಕೇಶನ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕೂಡಾ ವಿಚಾರಣೆ ನಡೆಸುತ್ತಿದ್ದು, ಮುಂಬೈ ಪೊಲೀಸರು ಪ್ರತ್ಯೇಕವಾಗಿ ತನಿಖೆ ಕೈಗೆತ್ತಿಕೊಂಡಿದ್ದರು.
ಶಿವಸೇನೆ ಸಂಸದೆ ಪ್ರಿಯಾಂಕ ಚತುರ್ವೇದಿ, ಅಸಾದುದ್ದೀನ್ ಉವೈಸಿ ಸೇರಿದಂತೆ ಹಲವಾರು ಮಂದಿ ಕೃತ್ಯವನ್ನು ನಾಚಿಕೆಗೇಡಿನ ಸಂಗತಿಯೆಂದು ಖಂಡಿಸಿದ್ದರು.
ತೀವ್ರ ವಿವಾದದ ಬಳಿಕ ‘ಬುಲ್ಲಿ ಬಾಯ್’ ಅಪ್ಲಿಕೇಶನನ್ನು ಸರಕಾರ ನಿಷೇದಿಸಿದೆ.















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ