ಚಿಕ್ಕಮಗಳೂರು:-ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕಫ್ರ್ಯೂವನ್ನು ಮುಂದುವರೆ ಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾತ್ರಿ ಕಫ್ರ್ಯೂವನ್ನು ಜಾರಿಗೊಳಿಸಲಾಗುತ್ತಿದೆ.
ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಮತ್ತಷ್ಟು ದಿನ ರಾತ್ರಿ ಕಫ್ರ್ಯೂ ಮುಂದುವರೆಯಲಿದೆ. ಸರ್ಕಾರದ ಜತೆ ಸಾರ್ವಜನಿಕರು ಕೈ ಜೋಡಿಸಿ, ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಇಲ್ಲದಿದ್ದರೆ ಲಾಕ್ಡೌನ್ ಅನಿವಾರ್ಯವಾಗಬಹುದು ಎಂದರು.
ಸದ್ಯಕ್ಕೆ ಲಾಕ್ಡೌನ್ ಮಾಡುವ ಉದ್ದೇಶ ಇಲ್ಲ. ಅನಿವಾರ್ಯವಾದರೆ ಮಾಡಬೇಕಾಗಬಹುದು. ಜನರ ಜೀವ ಉಳಿಸಲು ಆರ್ಥಿಕಾಭಿವೃದ್ಧಿ ಮತ್ತು ಶಾಲಾ -ಕಾಲೇಜು ಬಂದ್ ಮಾಡಬೇಕಾಗಬಹುದು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಕೋವಿಡ್ ನಿಯಮಗಳನ್ನು ಮುರಿಯದೆ ಸ್ವಯಂ ಅನುಸರಿಸಬೇಕು ಎಂದು ಹೇಳಿದರು.
ಸಾರ್ವಜನಿಕರ ಸಹಕಾರ ಸೂಕ್ತ ರೀತಿಯಲ್ಲಿ ದೊರೆಯದಿದ್ದರೆ ಲಾಕ್ಡೌನ್ ಅನಿವಾರ್ಯವಾಗಬಹುದು. ಈಗಾಗಲೇ ಮಾಸ್ಕ್ ಧರಿಸದೆ ಓಡಾಟ ಮಾಡುವುದು ಕಂಡು ಬರುತ್ತಿದೆ. ಮದುವೆ ಮೊದಲಾದ ಕಾರ್ಯಕ್ರಮಗಳಿಗೆ ಸಾವಿರಾರು ಜನ ಸೇರುತ್ತಿದ್ದಾರೆ. ಇದು ಸೋಂಕು ಹರಡಲು ಎಡೆಮಾಡಿಕೊಡಬಹುದು. ಈಗಾಗಲೇ ಕೋವಿಡ್ 2ನೇ ಅಲೆಯಲ್ಲಿ ಉಂಟಾದ ಸಾವು-ನೋವುಗಳು ನಮ್ಮ ನೆನಪಿನಲ್ಲಿವೆ. ಅದಕ್ಕೆ ಅವಕಾಶ ಕೊಡದಂತೆ ತಡೆಯುವ ಪ್ರಯತ್ನವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ