ಮಂಗಳೂರು: ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತದೊಂದಿಗೆ ಜಿಲ್ಲೆಯ ಜನರ ಸಹಕಾರ ಅತ್ಯಗತ್ಯ. ಈ ನಿಟ್ಟಿನಲ್ಲಿ ಜಿಲ್ಲೆಯ ನಾಗರಿಕರು, ವಿವಿಧ ಸಂಘ- ಸಂಸ್ಥೆಗಳ ಮುಖಂಡರು ಸಹರಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಕರೆ ನೀಡಿದರು. ಕೋವಿಡ್ ನಿಯಂತ್ರಣ ಸಂಬಂಧ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪದಾಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಖಾಸಗಿ ಬಸ್ಗಳ ಚಾಲಕರು ಹಾಗೂ ನಿರ್ವಾಹಕರು ಕಡ್ಡಾಯವಾಗಿ ಕೋವಿಡ್ನ ಎರಡು ಡೋಸ್ಗಳ ಲಸಿಕೆ ಪಡೆದಿರಬೇಕು ಮತ್ತು ಕರ್ತವ್ಯ ನಿರ್ವಹಣೆ ವೇಳೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಪ್ರಯಾಣಿಕರು ಬಸ್ ಹತ್ತುವ ವೇಳೆ ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ತಿಳಿಯಬೇಕು, ಪಡೆಯದ ಪ್ರಯಾಣಿಕರಿಗೆ ಜಾಗೃತಿ ಮೂಡಿಸಬೇಕು, ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಬಸ್ ಹತ್ತುವಂತೆ ತಿಳಿಸಬೇಕು. ಜಾಗೃತಿಗೆ ಸಂಬಂಧಿಸಿದಂತೆ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಸಭೆ ನಡೆಸಿ, ಚಾಲಕರು ಹಾಗೂ ನಿರ್ವಾಹಕರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಡಿಸಿ ಸೂಚಿಸಿದರು.
ಕ್ಯಾಟರಿಂಗ್ ಮಾಡುವವರು ಸಹ ವಿವಿಧ ಸಮಾರಂಭಗಳಲ್ಲಿ ಊಟ, ಉಪಹಾರ ನೀಡುವ ಸಂದರ್ಭಗಳಲ್ಲಿ ಕೋವಿಡ್ ನಿಯಮಾವಳಿಗಳ ಪಾಲನೆ ಕುರಿತು ತಿಳಿದುಕೊಳ್ಳಬೇಕು. ನಗರದಲ್ಲಿರುವ ಎಲ್ಲಾ ಮಾಲ್ಗಳಲ್ಲಿಯೂ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಲೇಬೇಕು. ಮಾಲ್ಗಳ ಪ್ರತಿಯೊಂದು ಮಳಿಗೆಗಳ ಪ್ರವೇಶ ದ್ವಾರದಲ್ಲಿ ಕೋವಿಡ್ ಲಸಿಕೆಯ ಎರಡೂ ಡೋಸ್ ಆಗಿರುವ ಬಗ್ಗೆ, ಮಾಸ್ಕ್ ಧಾರಣೆ ಕುರಿತು ಎಚ್ಚರ ವಹಿಸಬೇಕು, ಪೆಟ್ರೋಲ್ ಪಂಪ್ಗಳಲ್ಲಿ ಸುರಕ್ಷಿತ ಅಂತರ, ಕೋವಿಡ್ ವ್ಯಾಕ್ಸಿನ್ ಪಡೆಯುವ ಮಹತ್ವದ ಬಗ್ಗೆ ತಿಳಿಸಿಕೊಡಬೇಕು, ಹೊಟೇಲ್ಗಳಲ್ಲಿ ಶೇ.50ರ ಅನುಪಾತದಲ್ಲಿ ಗ್ರಾಹಕರಿಗೆ ಸೇವೆ ನೀಡುವುದು ಸಹಿತ ಗ್ರಾಹಕರು ಕೋವಿಡ್ ವ್ಯಾಕ್ಸಿನ್ ಪಡೆದ ಬಗ್ಗೆ ಖಚಿತ ಪಡಿಸಿಕೊಳ್ಳುವಂತಹ ಪ್ರಕ್ರಿಯೆಗಳನ್ನು ಅನುಸರಿಸಬೇಕು ಎಂದು ಡಿಸಿ ತಿಳಿಸಿದರು.
ಚಲನಚಿತ್ರ ಮಂದಿರಗಳು, ರೆಸ್ಟೋರೆಂಟ್ಗಳು ಶೇ.50ರ ಅನುಪಾತದಲ್ಲಿ ಕಾರ್ಯನಿರ್ವಹಣೆ ಹಾಗೂ ಕೋವಿಡ್ ನಿಯಮಾವಳಿಗಳ ಪಾಲನೆಯ ಬಗ್ಗೆ ಎಚ್ಚರ ವಹಿಸಬೇಕು. ವಿವಿಧ ಸಂಘ ಸಂಸ್ಥೆಗಳು ಕೆಲಸಗಾರರಲ್ಲಿ ಯಾವುದಾದರೂ ರೋಗ ಲಕ್ಷಣಗಳು ಕಂಡು ಬಂದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಬೇಕು. ವಾಣಿಜ್ಯ ಮಳಿಗೆಗಳು ಹಾಗೂ ಇತರೆಡೆ ಆರೋಗ್ಯ ಇಲಾಖೆಯವರು ಸ್ವ್ಯಾಬ್ ಸಂಗ್ರಹಕ್ಕೆ ಬಂದಾಗ ಸೂಕ್ತ ರೀತಿಯಲ್ಲಿ ಸಹಕರಿಸಬೇಕು, ಇಲ್ಲದಿದ್ದರೆ ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸಿ, ಅವರ ಮಳಿಗೆಗಳ ಪರವಾನಗಿಯನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ದ.ಕ.ಜಿಪಂ ಸಿಇಒ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್, ಖಾಸಗಿ ಬಸ್, ಹೋಟೆಲ್, ಚಲನಚಿತ್ರ, ಮಾಲ್, ಕ್ಯಾಟರಿಂಗ್ ಸಹಿತ ವಿವಿಧ ಸಂಘಗಳ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ