ಬೆಂಗಳೂರು,ಜ.6: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಹರಡುವ ಭೀತಿಯ ಹಿನ್ನೆಲೆಯಲ್ಲಿ ವಾರಾಂತ್ಯ ಕರ್ಫ್ಯೂ ಸಹಿತ ಕಠಿಣ ಕ್ರಮಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಜ.6 ರಿಂದ 19 ರ ವರೆಗೆ ಈ ನಿರ್ಬಂಧವು ಜಾರಿಯಲ್ಲಿರಲಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯಲ್ಲಿ, ಧಾರ್ಮಿಕ ಕೇಂದ್ರಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ. ವ್ಯಾಕ್ಸಿನ್ ಹಾಕಿಸಿಕೊಂಡ 50 ಭಕ್ತರಿಗೆ ಮಾತ್ರ ಒಮ್ಮೆಲೆ ಅವಕಾಶ ಎಂದು ಉಲ್ಲೇಖಿಸಲಾಗಿದೆ.
ಮಸೀದಿಗಳಲ್ಲಿ ಪ್ರಾರ್ಥನೆಗಾಗಿ ಮಸೀದಿಯ ಸಾಮರ್ಥ್ಯಕ್ಕನುಗುಣವಾಗಿ ಶೇ.50 ರಷ್ಟು ಮಂದಿಗೆ ಪ್ರವೇಶಿಸಲು ಅನುಮತಿ ನೀಡುವಂತೆ ವಕ್ಫ್ ಮಂಡಳಿ ಬೇಡಿಕೆ ಇಟ್ಟಿದ್ದು, ಇದರನ್ವಯ ಕಟ್ಟು ನಿಟ್ಟಿನ ಕೋವಿಡ್ ಪ್ರೋಟೋಕಾಲ್ ಪಾಲನೆಯೊಂದಿಗೆ ಶೇ.50 ರಷ್ಟು ಮಂದಿಗೆ ಏಕಕಾಲಕ್ಕೆ ಮಸೀದಿ ಪ್ರವೇಶಕ್ಕೆ ಸರ್ಕಾರ ಅನುಮತಿ ನೀಡಿದೆ.
ಮಾರ್ಗಸೂಚಿಗಳು
- ಆಯಾ ಮಸೀದಿಯ ಸಾಮರ್ಥ್ಯಕ್ಕನುಗುಣವಾಗಿ ಶೇ.50 ಮುಸಲ್ಲಿಗಳಿಂದ ಮೀರಬಾರದು.
- ಮಸೀದಿ ಪ್ರವೇಶಕ್ಕೆ ಮುಂಚಿತವಾಗಿ ದೇಹದ ತಾಪಮಾನವನ್ನು ತಪಾಸಣೆ ಮಾಡುವುದು, ಕೈಗಳನ್ನು ಸೋಪು ಅಥವಾ ಸ್ಯಾನಿಟೈಝರ್ ನಿಂದ ಶುಚಿಗೊಳಿಸುವುದು.
- ಕಡ್ಡಾಯವಾಗಿ ಮಾಸ್ಕ್ ಧರಿಸುವುದು.
- ಎರಡು ಡೋಸ್ ಸಂಪೂರ್ಣ ಲಸಿಕೆ ಪಡೆದಿರುವುದು.
- ನಮಾಜ್ ಮಾಡುವವರ ಮಧ್ಯೆ ಕನಿಷ್ಠ 5 ಅಡಿ ಅಂತರವನ್ನು ಕಾಯ್ದುಕೊಳ್ಳುವುದು.
- 65 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕೆಳಗಿನವರು ಮನೆಯಲ್ಲಿ ನಮಾಜ್ ಮಾಡುವುದು.
- ಮನೆಯಿಂದಲೇ ಮುಸಲ್ಲಾ ತರುವುದು.
- ಹಸ್ತಲಾಘವ ಮತ್ತು ಆಲಿಂಗನ ಮಾಡದಿರುವುದು.
ಇದರೊಂದಿಗೆ, ಆರೋಗ್ಯ ಇಲಾಖೆ, ಪೋಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಹೊರಡಿಸುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವಕ್ಫ್ ಮಂಡಳಿಗೆ ಸರ್ಕಾರ ನಿರ್ದೇಶಿಸಿದೆ. 

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ