ಮಂಗಳೂರು: ವಿಧಾನಸಭಾ ಕ್ಷೇತ್ರದ ಸಾಂಬಾರ್ ತೋಟ ಬೂತ್ ಸಂಖ್ಯೆ 109 ರ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ರವರನ್ನು ಬಿಜೆಪಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಮಂಗಳೂರು ವಿಧಾನಸಭಾ ಕ್ಷೇತ್ರದ ಪಜೀರು ಗ್ರಾಮದ ಬೂತ್ ಸಂಖ್ಯೆ 109 ಸಾಂಬಾರ್ ತೋಟ ಬೂತ್ ನ ಬಿಜೆಪಿ ಅಧ್ಯಕ್ಷರಾದ ಮಹಮ್ಮದ್ ಅಸ್ಕರ್ ರವರನ್ನು ಬಿಜೆಪಿ ಪಕ್ಷದ
ಶಿಸ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಮಂಗಳೂರು ಮಂಡಲಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ವಿಟ್ಲದ ಸಾಲೆತ್ತೂರಿನ ಜ.6 ರಂದು ನಡೆದ ಔತಣಕೂಟದಲ್ಲಿ ಭಾಗವಹಿಸಿದ ಮದುಮಗ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅವಮಾನ ಮಾಡಿದ ಬಗ್ಗೆ ವಿಟ್ಲ ಹಿಂದೂ ಜಾಗರಣೆ ವೇದಿಕೆ ಕಾರ್ಯದರ್ಶಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು. ಇದರ ತನಿಖೆ ನಡೆಸುತ್ತಿದ್ದ ವಿಟ್ಲ ಠಾಣೆ ಪೊಲೀಸರು ಮದುಮಗ ಬಾಷಿತ್ ಸಹೋದರ ಅರ್ಷಾದ್ ನನ್ನು ಜ .8 ರಂದು ಮಂಜೇಶ್ವರದಿಂದ ವಶಕ್ಕೆ ಪಡೆದು ವಿಟ್ಲ ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದ್ದರು.ಬಳಿಕ ಸಂಜೆ ವೇಳೆ ಆತನನ್ನು ಬಿಟ್ಟು ಕಳುಹಿಸಿದ್ದರು.
ಆರೋಪಿಯ ಸಹೋದರನ ಬಿಡುಗಡೆಯಲ್ಲಿ ಮಹಮ್ಮದ್ ಅಸ್ಗರ್ ಕೈವಾಡವಿದೆಯೆಂಬ ಗುಲ್ಲು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತ್ತು. ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಜಿಲ್ಲಾ ಬಿಜೆಪಿ ಮುಖಂಡರಲ್ಲಿ ಅಸ್ಗರ್ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಆಪ್ತರಾಗಿರುವ ಅಸ್ಗರ್, ರಹೀಮ್ ಉಚ್ಚಿಲರ ಆಪ್ತ ಸ್ನೇಹಿತ.
ಮುಂದಕ್ಕೆ ಅಸ್ಗರ್ ಅವರು ಯಾವ ರಾಜಕೀಯ ಪಕ್ಷದಿಂದ ಗುರುತಿಸಿಕೊಳ್ಳುತ್ತಾರೆ ಎಂಬುದರ ಬಗ್ಗೆ ಸಾಮಾಜಿಕ ತಾಣದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಎಸ್ಡಿಪಿಐ ಇಲ್ಲವೇ ಜೆಡಿಎಸ್ ನಲ್ಲಿ ಸೇರಲಿದ್ದಾರೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ