ರಿಯಾದ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಿನಿ ಸೂಪರ್ ಮಾರ್ಕೆಟ್ ಒಳಗೆ ನುಗ್ಗಿದ ಘಟನೆ ಸೌದಿ ಅರೇಬಿಯಾದ ಅಲ್ ಖಸೀಂನಲ್ಲಿ ಜ.10 ರಂದು ನಡೆದಿದೆ. ಘಟನೆ ವೇಳೆ ಅಂಗಡಿಯಲ್ಲಿ ಸಾಮಾನು ಖರೀದಿಸಲು ಬಂದಿದ್ದ ಸ್ಥಳೀಯ ಮಹಿಳೆ, ಅಂಗಡಿ ಸಿಬ್ಬಂದಿ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಾಮಾನುಗಳನ್ನು ಖರೀದಿಸಿದ ಮಹಿಳೆ, ಹಣ ಪಾವತಿಸಲು ಕೌಂಟರ್ ಮುಂದೆ ಕಾಯುತ್ತಿರುವ ವೇಳೆ ಭಾರೀ ಶಬ್ದದೊಂದಿಗೆ ಕಾರು ಅನಿರೀಕ್ಷಿತವಾಗಿ ಅಂಗಡಿಗೆ ನುಗ್ಗಿದೆ.ಅಪಘಾತದ ಶಬ್ದ ಕೇಳಿ ಮಹಿಳೆ ಹೊರಗೆ ಓಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಂಗಡಿಯ ಮುಂಭಾಗದ ಗಾಜುಗಳನ್ನು ಒಡೆದುಹಾಕಿ ಒಳನುಗ್ಗಿದ ಕಾರು, ಅಂಗಡಿಗೆ ಅಪಾರ ನಾಶ, ನಷ್ಟವನ್ನುಂಟುಮಾಡಿದೆ.ಸೌದಿ ಪ್ರಜೆ ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅಪಘಾತದ ದೃಶ್ಯಗಳು ಮಿನಿಮಾರ್ಕೆಟ್ನಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
🛑شاهد.. سيارة مسرعة تقتحم محل تموينات في #القصيم ونجاة امرأة من الموت بأعجوبة
وقع الحادث بتاريخ 10 يناير أي قبل 3 أيام، حيث أظهر امرأة تحضر بعض الأغراض من المحل وبينما ذهبت لتحاسب الكاشير، فوجئت باقتحام المركبة للمحل.
الحمدلله لا اصابات.#السعودية #مصر #القاهرة #الرياض pic.twitter.com/tG9H0uY6xf
— م. صالح الخراشي (@saleh1u1) January 13, 2022
















ಇನ್ನಷ್ಟು ಸುದ್ದಿಗಳು
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ