ಹೊಸದಿಲ್ಲಿ: ದೇಶದಲ್ಲಿ ಮತದಾನಕ್ಕೆ ಮತಪತ್ರಗಳ ಬದಲಿಗೆ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಪರಿಚಯಿಸಲು ಕಾರಣವಾದ ಪ್ರಜಾಪ್ರತಿನಿಧಿ ಕಾಯ್ದೆಯ ನಿಬಂಧನೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಗೆ ನೀಡಿದೆ. ಉತ್ತರಪ್ರದೇಶ, ಗೋವಾ, ಪಂಜಾಬ್, ಮಣಿಪುರ ಹಾಗೂ ಉತ್ತರಾಖಂಡದಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮನವಿಯ ವಿಚಾರಣೆ ನಡೆಸುವ ಅಗತ್ಯತೆ ಇದೆ ಎಂಬ ನ್ಯಾಯವಾದಿ ಎಂ.ಎಲ್. ಶರ್ಮಾ ಅವರ ಪ್ರತಿಪಾದನೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರನ್ನು ಒಳಗೊಂಡ ಪೀಠ ಆಲಿಸಿತು.
‘‘ನಾವು ಪರಿಶೀಲಿಸಲಿದ್ದೇವೆ. ನಾನು ಅದನ್ನು ಇತರ ಪೀಠದ ಮುಂದೆ ವಿಚಾರಣೆಗೆ ಪರಿಗಣಿಸಲಿದ್ದೇನೆ’’ ಎಂದು ರಮಣ ಅವರು ಹೇಳಿದರು.
ಇವಿಎಂಗಳ ಬಳಕೆಗೆ ಅನುಮತಿ ನೀಡುವ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 61 ಎ ಸಂಸತ್ತಿನಲ್ಲಿ ಅಂಗೀಕಾರಗೊಂಡಿಲ್ಲ. ಆದುದರಿಂದ ಅದನ್ನು ಹೇರಲು ಸಾಧ್ಯವಿಲ್ಲ ಎಂದು ಶರ್ಮಾ ಅವರು ತಿಳಿಸಿದರು. ‘‘ನಾನು ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿದ್ದೇನೆ. ನ್ಯಾಯಾಂಗ ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು. ಮತಪತ್ರದ ಮೂಲಕ ಚುನಾವಣೆ ನಡೆಯಲಿ’’ ಎಂದು ಶರ್ಮಾ ಅವರು ಪ್ರತಿಪಾದಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ