ನರಗುಂದ: ನರಹಂತಕರ ಕುಕೃತ್ಯಕ್ಕೆ ಬಲಿಯಾದ ಮರ್ಹೂಂ ಶಮೀರ್ ಶಹಾಪೂರ ರವರ ಮನೆಗೆ ಎಸ್ಸೆಸ್ಸೆಫ್ ಕೋಶಾಧಿಕಾರಿ ಹಾಫಿಝ್ ಸುಫ್ಯಾನ್ ಸಖಾಫಿ ಹಾಗೂ ತಂಡ ಭೇಟಿ ನೀಡಿ ಸಾಂತ್ವನ ಹೇಳಿದರು.
ಧರ್ಮ ಜಾತಿ ಅಥವಾ ರಾಜಕೀಯದ ಹೆಸರಲ್ಲಿ ಅಮಾಯಕ ಜೀವಗಳು ಬಲಿಯಾಗುತ್ತಿರುವುದು ಖಂಡನೀಯ. ಇದರಿಂದ ಯಾವ ಧರ್ಮಕ್ಕೂ ಲಾಭವೋ ನಷ್ಟವೋ ಇಲ್ಲ, ಬದಲಾಗಿ ಅಮಾಯಕ ಕುಟುಂಬಗಳು ಅನಾಥವಾಗುತ್ತಿವೆ ಎಂದು ಸ್ಪಷ್ಟಪಡಿಸಿದರು.ಅಮಾಯಕ ಯುವಕರನ್ನು ಗುಂಪುಸೇರಿ ಹತ್ಯೆ ಮಾಡುವುದು ಧೀರತೆಯಲ್ಲ, ಬದಲಾಗಿ ಅದು ಹೇಡಿತನ. ಇತರರ ಜೀವ ಉಳಿಸುವುದೇ ನಿಜವಾದ ಧೀರತೆ ಎಂದು ಅವರು ಹೇಳಿದರು.
ಜೀವಕ್ಕೆ ಬದಲಾಗಿ ಜೀವ ತೆಗೆಯುವುದು ಇಸ್ಲಾಮಿನ ಸಂಸ್ಕೃತಿಯಲ್ಲ. ಆದ್ದರಿಂದ ನಾವು ಯಾರೂ ಅಷ್ಟು ಕೀಳ್ಮಟ್ಟಕ್ಕೆ ಇಳಿಯಲ್ಲ. ಇಸ್ಲಾಮಿನ ಶರೀಅಃ ಚಾಲ್ತಿಯಲ್ಲಿರುವ ರಾಷ್ಟ್ರಗಳಲ್ಲೂ ಕೂಡ ನ್ಯಾಯಾಧೀಶರ ತೀರ್ಮಾನದಂತೆ ಮಾತ್ರವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಸೌಹಾರ್ದಯುತವಾಗಿ ಬದುಕುತ್ತಿದ್ದ ನರಗುಂದದ ಜನರೆಡೆಯಲ್ಲಿ ಧರ್ಮಾಂದತೆಯ ವಿಷಬೀಜ ಬಿತ್ತಿ ಅಮಾಯಕ ಕುಟುಂಬಗಳನ್ನು ಬೀದಿಪಾಲು ಮಾಡುತ್ತಿರುವ ಮುಖಂಡರು ಹಾಗೂ ಹಂತಕರಿಗೆ ತಕ್ಕ ಶಿಕ್ಷೆ ನೀಡಿ ಇಂತಹ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಹಾಫಿಝ್ ಸುಫ್ಯಾನ್ ಸಖಾಫಿ ಎಚ್ಚರಿಕೆ ನೀಡಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ