ಕಿನ್ಯಾ: ಭಾರತದ 73ನೇ ಗಣರಾಜ್ಯೋತ್ಸವದ ಅಂಗವಾಗಿ ಎಸ್.ಎಸ್.ಎಫ್ ಕಿನ್ಯ ಸೆಕ್ಟರ್ ವತಿಯಿಂದ ಪುಸ್ತಕ ಹಸ್ತಾಂತರ ಕಾರ್ಯಕ್ರಮವು ಕಿನ್ಯಾ ಗ್ರಾಮ ಪಂಚಾಯಿತಿಯ ಗ್ರಂಥಾಲಯದಲ್ಲಿ ನಡೆಯಿತು.
ರಾಜ್ಯ ಪ್ರತಿಭೋತ್ಸವದ ಪ್ರತಿಭೆ ಹಾಫಿಝ್ ಕೆ.ಎಂ. ಸಈದ್ ಮೀಂಪ್ರಿ ಕಾರ್ಯಕ್ರಮವನ್ನು ಉದ್ದೇಶಿಸಿ ಸವಿಸ್ತಾರವಾಗಿ ಮಾತನಾಡಿದರು. ಸಈದ್ ರವರ ಭಾಷಣಕ್ಕೆ ಪಂಚಾಯತ್ ಪಿ.ಡಿ.ಒ ಮೆಚ್ಚುಗೆ ವ್ಯಕ್ತಪಡಿಸಿ, ಸೆಕ್ಟರ್ ಸಮಿತಿಯ ಕಾರ್ಯಕ್ರಮಕ್ಕೆ ಅಭಿನಂದನೆ ಸಲ್ಲಿಸಿದರು.ಸೆಕ್ಟರ್ ಅಧ್ಯಕ್ಷರಾದ ನೌಫಲ್ ಅಹ್ಸನಿ ಪುಸ್ತಕ ಓದುವುದರ ಮಹತ್ವದ ಕುರಿತು ವಿಷಯ ಮಂಡಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸಿಬ್ಬಂದಿಗಳು, ಸದಸ್ಯರುಗಳಾದ ಸಯ್ಯಿದ್ ತ್ವಾಹಾ, ಫಾರೂಕ್ ಕಿನ್ಯಾ, ಫಯಾಝ್ ಕಿನ್ಯಾ, ಉಳ್ಳಾಲ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಆಶಿಕ್, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಬಶೀರ್ ಕೂಡಾರ, ಕೋಶಾಧಿಕಾರಿ ಹುಸೈನಾರ್ ಹಾಗೂ ಸೆಕ್ಟರ್ ಕಾರ್ಯದರ್ಶಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.