ಮೀರತ್,ಫೆ.3: ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ವೇಳೆ ಎಐಎಂಐಎಂ ನಾಯಕ ಅಸದುದ್ದೀನ್ ಉವೈಸಿ ಅವರ ವಾಹನವನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಲಾಗಿದೆ.ಈ ಬಗ್ಗೆ ಸ್ವತಃ ಉವೈಸಿಯವರೇ ಟ್ವೀಟ್ ಮಾಡಿದ್ದು, ಅವರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಬೈಕ್ನಲ್ಲಿ ಬಂದಿದ್ದ ತಂಡ ಗುಂಡು ಹಾರಿಸಿದೆ. ದಾಳಿಯಲ್ಲಿ ತನಗೆ ಯಾವುದೇ ಗಾಯವಾಗಿಲ್ಲ, ಕಾರಿನ ಟೈರ್ ಪಂಕ್ಚರ್ ಆಗಿದ್ದರಿಂದ ಮತ್ತೊಂದು ಕಾರಿನಲ್ಲಿ ದೆಹಲಿಗೆ ವಾಪಸಾಗಿದ್ದೇನೆ ಎಂದು ಉವೈಸಿ ಹೇಳಿದ್ದಾರೆ. ಯುಪಿಯ ಮೀರತ್ನ ಕಿತ್ತೌರಿನಲ್ಲಿ ಪ್ರಚಾರ ಸಭೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ದಾಳಿ ನಡೆದಿದೆ. ಉತ್ತರ ಪ್ರದೇಶದ ಚಜರ್ಸಿ ಟೋಲ್ ಪ್ಲಾಜಾ ಬಳಿ ಈ ದಾಳಿ ನಡೆದಿದೆ.
“ಛಜರ್ಸಿ ಟೋಲ್ ಗೇಟ್ ಬಳಿ ಮೂರು ಮಂದಿಯ ಗುಂಪೊಂದು ನನ್ನ ಕಾರಿಗೆ 4 ಸುತ್ತು ಗುಂಡು ಹಾರಿಸಿದೆ. ಆ ಬಳಿಕ ಆಯುಧಗಳನ್ನು ಅಲ್ಲೇ ಬಿಟ್ಟು ಪರಾರಿಯಾದರು. ನನ್ನ ಕಾರಿನ ಟೈರ್ ಪಂಕ್ಚರ್ ಆಗಿದೆ, ಆದರೆ ನಾನು ಇನ್ನೊಂದು ಕಾರಿನಲ್ಲಿ ಹೊರಟಿದ್ದೇನೆ.ನಾವೆಲ್ಲರೂ ಸುರಕ್ಷಿತವಾಗಿದ್ದೇವೆ. ಅಲ್ಹಮ್ದುಲಿಲ್ಲಾಹ್” ಎಂದು ಅವರು ಟ್ವಿಟರ್ನಲ್ಲಿ ತಿಳಿಸಿದ್ದಾರೆ.
कुछ देर पहले छिजारसी टोल गेट पर मेरी गाड़ी पर गोलियाँ चलाई गयी। 4 राउंड फ़ायर हुए। 3-4 लोग थे, सब के सब भाग गए और हथियार वहीं छोड़ गए। मेरी गाड़ी पंक्चर हो गयी, लेकिन मैं दूसरी गाड़ी में बैठ कर वहाँ से निकल गया। हम सब महफ़ूज़ हैं। अलहमदु’लिलाह। pic.twitter.com/Q55qJbYRih
— Asaduddin Owaisi (@asadowaisi) February 3, 2022
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ