ಬೆಂಗಳೂರು,ಫೆ.4: ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸಿ ಕಾಲೇಜಿಗೆ ಬರುವುದು ಧಾರ್ಮಿಕ ನಿಯಮ. ನಮ್ಮ ಸಂವಿಧಾನ ಎಲ್ಲಾ ಧರ್ಮದವರಿಗೂ ಅವರು ನಂಬಿದ ಆಚರಣೆಗಳನ್ನು ಪಾಲಿಸಲು ಅವಕಾಶ ನೀಡಿದೆ.
ಹಿಜಾಬ್ ಧರಿಸಿರುವ ಮುಸ್ಲಿಂ ಹೆಣ್ಣು ಮಕ್ಕಳನ್ನು ಕಾಲೇಜು ಪ್ರವೇಶಿಸದಂತೆ ಗೇಟ್ ಬಂದ್ ಮಾಡಿದ ಉಡುಪಿ ಜಿಲ್ಲೆ ಕುಂದಾಪುರ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ
ಬಿಜೆಪಿಯವರು ಶಾಲಾ ಕಾಲೇಜುಗಳಲ್ಲೂ ರಾಜಕಾರಣ ಮಾಡಲಾರಂಭಿಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುತ್ತಿರುವುದು ಹೊಸದಲ್ಲ, ಆರಂಭದಿಂದಲೂ ಅವರು ಹಿಜಾಬ್ ಧರಿಸಿಯೇ ಬರುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿಗಳು ಈ ಮೊದಲು ಕೇಸರಿ ಶಾಲು ಧರಿಸಿ ಬರುತ್ತಿರಲಿಲ್ಲ. ಇದ್ದಕ್ಕಿದ್ದಂತೆ ಕೇಸರಿ ಶಾಲು ಹಾಕಿಕೊಳ್ಳುತ್ತಿರುವುದರ ಹಿಂದೆ ಇರುವ ದುರುದ್ದೇಶವೇನು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯನ್ನು ನಾನು ನೋಡಿದ್ದೇನೆ. ಅದರಲ್ಲಿ ವಸ್ತ್ರ ಸಂಹಿತೆ ಇಲ್ಲ. ಬಿಜೆಪಿಯವರು ತಮ್ಮ ಸರ್ಕಾರದ ಲೋಪ ದೋಷಣಗಳನ್ನು ಹಾಗೂ ವೈಪಲ್ಯಗಳನ್ನು ಮರೆ ಮಾಚಲು ವಿಷಯಾಂತರ ಮಾಡುತ್ತಿದ್ದಾರೆ. ಹಿಜಾಬ್ ವಿಷಯವನ್ನು ಬೇಕೆಂತಲೇ ಮುನ್ನೆಲೆಗೆ ತಂದಿದ್ದಾರೆ ಎಂದು ಆರೋಪಿಸಿದರು.
ಅವರ್ಯಾರೋ ಬಿಜೆಪಿಯ ಶಾಸಕ ರಘುಪತಿ ಭಟ್ ಸಭೆ ಮಾಡಿ ಹೇಳಿದರು ಎಂಬ ಕಾರಣಕ್ಕೆ ಪ್ರಾಂಶುಪಾಲರು ಕಾಲೇಜಿನ ಗೇಟ್ ಮುಚ್ಚಿ ಹಿಜಾಬ್ ಧರಿಸಿ ಬಂದ ಮಕ್ಕಳಿಗೆ ಪ್ರವೇಶ ನಿರಾಕರಿಸಿದ್ದಾರೆ. ಈ ರೀತಿ ಆದೇಶ ನೀಡಲು ರಘುಪತಿ ಭಟ್ ಯಾರು. ಪ್ರಾಂಶುಪಾಲರ ನಡವಳಿಕೆ ಶಿಕ್ಷಣದ ಮೂಲಭೂತ ಹಕ್ಕಿಗೆ ವಿರುದ್ಧವಾಗಿದೆ. ಕಡ್ಡಾಯ ಶಿಕ್ಷಣ ಕಾಯ್ದೆಯ ಉಲ್ಲಂಘನೆಯಾಗಿದೆ. ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಈ ಹುನ್ನಾರ ಸರಿಯಲ್ಲ ಎಂದರು.
















ಇನ್ನಷ್ಟು ಸುದ್ದಿಗಳು
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ