ಬೆಂಗಳೂರು: ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನೇ ಪಾಲಿಸಬೇಕು.ಈ ಕುರಿತು ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ಸುತ್ತೋಲೆ ಪ್ರಕಟಿಸಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಸಮವಸ್ತ್ರ ಸಂಹಿತೆ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಇಲಾಖೆ ಮತ್ತು ಪಿಯು ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ನಂತರ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಈ ವಿಚಾರ ಪ್ರಸ್ತುತ ನ್ಯಾಯಾಲಯದಲ್ಲಿದೆ. ಅಡ್ವೊಕೇಟ್ ಜನರಲ್ ಅವರೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯಬೇಕಿದೆ.
ಸರ್ಕಾರದ ನಿಲುವನ್ನು ಕೋರ್ಟ್ಗೆ ಮನವರಿಕೆ ಮಾಡಿಕೊಡಲು ಅಡ್ವೊಕೇಟ್ ಜನರಲ್ಗೆ ಸೂಚಿಸಿದ್ದಾರೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಮವಸ್ತ್ರ ಸಂಹಿತೆ ಪಾಲಿಸಬೇಕು ಎನ್ನುವುದನ್ನು ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸುತ್ತೇವೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಉಡುಪಿ ಶಾಸಕ ರಘುಪತಿ ಭಟ್ ಅವರ ವಿರುದ್ಧ ವಿನಾಕಾರಣ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ. ಅವರು ಶಿಕ್ಷಣ ವಂಚಿತ ಮಕ್ಕಳಿಗೆ ಸಮಸ್ಯೆಯಾಗದಂತೆ ಹಲವು ಕ್ರಮ ತೆಗೆದುಕೊಂಡಿದ್ದಾರೆ. ಎಸ್ಡಿಎಂಸಿ ಅಧ್ಯಕ್ಷರಾಗಿ ಶಾಲೆ ಅಭಿವೃದ್ಧಿಪಡಿಸಿದ್ದಾರೆ. ಸ್ಕಾರ್ಪ್ ವಿಚಾರದಲ್ಲಿ ಬಾಂಬೆ, ಕೇರಳ ಹೈಕೋರ್ಟ್ಗಳು ಈಗಾಗಲೇ ತೀರ್ಪು ನೀಡಿವೆ. ಶಾಲೆಗಳಿಗೆ ಸ್ಕಾರ್ಪ್ ಧರಿಸಿ ಬರಬಾರದು ಎಂದೇ ಹೇಳಿವೆ.
ಶಾಲಾ ಕಾಲೇಜು ಸೋದರತ್ವ ಬೆಳೆಸಲು ಪೂರಕವಾಗಬೇಕು. ಮಕ್ಕಳು ಶಾಲೆಗೆ ಸೇರುವಾಗ ವಸ್ತ್ರಸಂಹಿತೆಯನ್ನು ಒಪ್ಪಿ ಸಹಿ ಹಾಕಿರುತ್ತಾರೆ. ಕಳೆದ ಒಂದೂವರೆ ವರ್ಷದಿಂದ ಸಮವಸ್ತ್ರ ಧರಿಸಿ ಬಂದಿದ್ದಾರೆ. ಇದೀಗ ಕೆಲವರಿಂದ ಸಮಸ್ಯೆಯಾಗಿದೆ. ಸಮಸ್ಯೆ ಬಗೆಹರಿಸಲು ಶಾಸಕರು ಮತ್ತು ಮುಖಂಡರ ಜೊತೆ ಚರ್ಚೆ ನಡೆಸುತ್ತೇವೆ. ವಸ್ತ್ರಸಂಹಿತೆ ಪಾಲಿಸುವಂತೆ ಮತ್ತೆ ಸುತ್ತೋಲೆ ಹೊರಡಿಸುತ್ತೇವೆ ಎಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಶಿಕ್ಷಣ ಸಚಿವ ನಾಗೇಶ್ ಹೇಳಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ