ಬೆಂಗಳೂರು: ಉಡುಪಿ ಹಾಗೂ ರಾಜ್ಯದ ಕೆಲವು ಜಿಲ್ಲೆಗಳ ಸರ್ಕಾರಿ ಶೈಕ್ಷಣಿಕ ಕೇಂದ್ರಗಳಲ್ಲಿ ಉದ್ಭವಿಸಿರುವ ಹಿಜಾಬ್ ಸಮಸ್ಯೆ ಬಗ್ಗೆ ರಾಜ್ಯ ಶಿಕ್ಷಣ ಸಚಿವರೊಂದಿಗೆ ಸಮಾಲೋಚನೆ ನಡೆಸಿದ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಎನ್ ಕೆ ಎಂ ಶಾಫಿ ಸಅದಿಯವರು ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಬೇಕು ಎಂದಿದ್ದಾರೆ.
ಹೈಕೋರ್ಟ್ ತೀರ್ಪು ಬರುವವರೆಗೆ ಸಂಹಿತೆ ಪಾಲಿಸಬೇಕು. ಹಿಜಾಬ್ ಗೊಂದಲ ಶೀಘ್ರ ಪರಿಹಾರವಾಗಬೇಕು. ಮಕ್ಕಳ ಭವಿಷ್ಯಕ್ಕೆ ಇದರಿಂದ ತೊಡಕಾಗಬಾರದು. ಹೈಕೋರ್ಟ್ ಅಂತಿಮ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷರಾದ ಶಾಫಿ ಸಅದಿ ಹೇಳಿದರು.
ಕರಾವಳಿ ಮತ್ತು ಮಲೆನಾಡಿನ ಕೆಲ ಸರ್ಕಾರಿ ಕಾಲೇಜುಗಳಲ್ಲಿ ಉದ್ಘವಿಸಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಕುರಿತು ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ಶಿಕ್ಷಣ ಕಾಯ್ದೆಯನ್ವಯ ಪ್ರಕಟಿಸಿರುವ ಸುತ್ತೋಲೆಯನ್ನು ಎಲ್ಲರೂ ಗೌರವಿಸಬೇಕು ಎಂದರು.
ರಾಜ್ಯದ ಹಲವೆಡೆಯಿಂದ ಸಮಾಜದ ಮುಖಂಡರು ಕರೆ ಮಾಡಿ, ಹಿಜಾಬ್ ಧರಿಸಿದರೆ ಕಾಲೇಜ್ ಪ್ರವೇಶಕ್ಕೆ ಅನುಮತಿಸುವುದಿಲ್ಲ ಎಂದು ಹೇಳಿದ್ದಾರೆ. ಇದು ಖೇದಕರ ಸಂಗತಿ, ಶೈಕ್ಷಣಿಕವಾಗಿ ನಮ್ಮ ಸಮುದಾಯ ಬಹಳ ಹಿಂದುಳಿದಿದೆ. ಹಿಜಾಬ್ ವಿಚಾರ ರಾಜ್ಯದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಇದಕ್ಕೆ ಬ್ರೇಕ್ ಹಾಕದಿದ್ದರೆ ಶಿಕ್ಷಣ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರಲಿದೆ ಎಂದರು.
ಈ ವಿವಾದ ಇದೀಗ ಹೈಕೋರ್ಟ್ ಪರಿಶೀಲನೆಯಲ್ಲಿದೆ. ಹೈಕೋರ್ಟ್ ನೀಡುವ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಈ ಮೊದಲೂ ರಾಜ್ಯದ ಹಲವೆಡೆ ನಮ್ಮ ಸಮುದಾಯದ ಮಕ್ಕಳು ಹಿಜಾಬ್ ಧರಿಸಿ ಶಾಲೆಗೆ ಬರುತ್ತಿದ್ದರು. ಅಂಥ ಸ್ಥಳಗಳಲ್ಲಿ ಮೊದಲಿನಂತೆಯೇ ವ್ಯವಸ್ಥೆ ಮುಂದುವರಿಸಬೇಕು. ಹೊಸದಾಗಿ ಹಿಜಾಬ್ ಧರಿಸಿ ಬಂದ ಕಡೆ ತಡೆಯೊಡ್ಡಿದ್ದಾರೆ. ಅಂಥ ಸ್ಥಳಗಳಲ್ಲಿ ಯಥಾಸ್ಥಿತಿ ಕಾಪಾಡುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಕುರಿತು ಶಿಕ್ಷಣ ಸಚಿವರು ನನಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.

















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ