ಶಿವಮೊಗ್ಗ: ಹಿಜಾಬ್ ವಿವಾದವಾಗುವ ವಿಷಯವೇ ಅಲ್ಲ. ಮುಸ್ಲಿಂ ಹೆಣ್ಮಕ್ಕಳು ಕಾಲೇಜಿನಲ್ಲಿ ಹಿಜಾಬ್ ಧರಿಸುತ್ತಿರುವುದು ಕೂಡ ಹೊಸದೇನಲ್ಲ. ಸಮವಸ್ತ್ರದ ದುಪ್ಪಟ್ಟಾದಲ್ಲಿ ತಲೆ ಮುಚ್ಚಿಕೊಂಡರೆ ಸಮಸ್ಯೆ ಏನು? ಇಲ್ಲಿ ಸಮಸ್ಯೆ ಹಿಜಾಬ್ನದ್ದಲ್ಲ, ಮನಸ್ಥಿತಿಯದ್ದು. ಏಕಾಏಕಿ ಹಿಜಾಬ್ ಸಮಸ್ಯೆಯಾಗಿ ಉಲ್ಬಣಗೊಂಡಿದ್ದು ಯಾಕೆ?
ಈ ಹಿಂದೆ ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಹಿಜಾಬ್ ವಿವಾದ ಉಂಟಾದಾಗ ಶೀಘ್ರವೇ ಬಗೆಹರಿದಿದೆ. ಆದರೆ ಕರಾವಳಿಯಲ್ಲಿ ಮಾತ್ರ ಇದು ಉಲ್ಬಣವಾಗುತ್ತಿರುವುದೇಕೆ ಎನ್ನುವುದನ್ನು ಬಿಡಿಸಿ ಹೇಳಬೇಕಿಲ್ಲ. ವಿದ್ಯಾರ್ಥಿಗಳ ಹೆಗಲ ಮೇಲೆ ಬಂದೂಕು ಇಟ್ಟು ತಮ್ಮ ಕಾರ್ಯ ಸಾಧಿಸುವವರ ಬಗ್ಗೆ ಪ್ರಜ್ಞಾವಂತರು ಎಚ್ಚೆತ್ತುಕೊಳ್ಳಬೇಕು. ಕ್ಯಾಂಪಸ್ಗಳನ್ನು ಪ್ರಯೋಗ ಶಾಲೆಗಳನ್ನಾಗಿ ಮಾಡುವ ಕುತ್ಸಿತ ಮನಸ್ಸುಗಳ ಷಡ್ಯಂತ್ರವನ್ನು ಆರಿತುಕೊಳ್ಳಬೇಕು.
ಸಂವಿಧಾನಬದ್ಧ ಹಕ್ಕುಗಳು ಇರುವಾಗ ಇಲ್ಲಿ ಆಯ್ಕೆಯ ಪ್ರಶ್ನೆ ಉದ್ಭವಿಸುವುದಿಲ್ಲ. ಹಿಜಾಬ್ ಮುಖ್ಯವೋ? ಶಿಕ್ಷಣ ಮುಖ್ಯವೋ? ಎನ್ನುವ ಪ್ರಶ್ನೆಗಳು ಅಲ್ಪಸಂಖ್ಯಾತ ಸಮುದಾಯವನ್ನು ಇನ್ನಷ್ಟು ದುರ್ಬಲಗೊಳಿಸುವ ತಂತ್ರ ಮಾತ್ರವಲ್ಲದೇ, ಸಮುದಾಯವನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಕುತಂತ್ರವೂ ಹೌದು.
ಹಿಜಾಬ್ ಧರಿಸಿದ ವಿದ್ಯಾರ್ಥಿಗಳನ್ನು ಶಾಲೆಯ ಕ್ಯಾಂಪಸ್ನೊಳಗೆ ಪ್ರವೇಶ ನಿರಾಕರಿಸಿದ ಪ್ರಾಂಶುಪಾಲರ ಮನಸ್ಥಿತಿ ನಿಜಕ್ಕೂ ಗಾಬರಿ ಹುಟ್ಟಿಸುವಂಥದ್ದು. ಭಾರತದಂಥ ಪ್ರಜಾಸತಾತ್ಮಕ ರಾಷ್ಟ್ರದಲ್ಲಿ ಇಂಥ ಸರ್ವಾಧಿಕಾರಿ ಧೋರಣೆ ಒಪ್ಪಿಕೊಳ್ಳುವಂಥದ್ದಲ್ಲ. ಬಟ್ಟೆಯ ಕಾರಣಕ್ಕೆ ಶಿಕ್ಷಣದ ಮೂಲಭೂತ ಹಕ್ಕನ್ನು ಕಿತ್ತುಕೊಂಡಿರುವುದು ಐತಿಹಾಸಿಕ ದುರಂತ. ಆಸಕ್ತರು ಹಿಜಾಬ್ ಧರಿಸುವುದರಿಂದ ಇತರ ಯಾರಿಗೂ ತೊಂದರೆಯುಂಟು ಮಾಡುವುದಿಲ್ಲ. ಆದುದರಿಂದ ಸಮವಸ್ತ್ರ ಬಣ್ಣದ ಹಿಜಾಬ್ ಧರಿಸಲು ವಿದ್ಯಾರ್ಥಿನಿಯರಿಗೆ ಅವಕಾಶ ಕೊಡುವುದೊಂದೇ ಈ ವಿವಾದಕ್ಕೆ ಪರಿಹಾರ.
ಲತೀಫ್ ಸಅದಿ
ಅಧ್ಯಕ್ಷರು SSF ಕರ್ನಾಟಕ ರಾಜ್ಯ

















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ